ಅಕ್ರಮ ಮರಳು ಸಾಗಾಟದ ಟ್ರ್ಯಾಕ್ಟರ್ ಪಲ್ಟಿ- ಸಹೋದರರಿಬ್ಬರ ಸಾವು

ರಾಯಚೂರು: ತಾಲೂಕಿನ ಬುಳ್ಳಾಪುರ ಗ್ರಾಮದ ಬಳಿ ರಾತ್ರಿ ವೇಳೆ ಮರಳು ಸಾಗಣೆ ಟ್ರ್ಯಾಕ್ಟರ್ ಪಲ್ಟಿಯಾಗಿ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಿಲ್ಲೆಸುಗೂರು ಕ್ಯಾಂಪ್ ನ ಸಾಮುವೆಲ್( 29) ಹಾಗೂ ಶಾಂತರಾಜ್(25) ಮೃತ ಸಹೋದರರು. ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುವಾಗ ದುರ್ಘಟನೆ ನಡೆದಿದೆ. ಸಂಜೆ 6ಋ ಬಳಿಕ ಮರಳು ಸಾಗಣೆ ನಿಷೇಧವಿದ್ದರೂ ಜಿಲ್ಲೆಯಲ್ಲಿ ಅಹೋರಾತ್ರಿ ಮರಳು ಸಾಗಣೆ ದಂಧೆ ನಡೆದಿದೆ. ಅಕ್ರಮದಂಧೆ ತಡೆಯುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

ರಾತ್ರಿ ಅವಸರದಲ್ಲಿ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿದ್ದಕ್ಕೆ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಘಟನಾ ಸ್ಥಳಕ್ಕೆ ರಾಯಚೂರು ಡಿವೈಎಸ್‍ಪಿ ಶಿವನಗೌಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಇಡಪನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *