ಅಪಘಾತದಲ್ಲಿ ಕಂದಾಯ ನಿರೀಕ್ಷಕ ದುರ್ಮರಣ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕು ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ ಅಂಬರೀಶ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಚಿಂತಾಮಣಿ ತಾಲೂಕು ಕಚೇರಿಯಲ್ಲಿ ಕರ್ತವ್ಯ ಮುಗಿಸಿ ಬೈಕ್ ಮೂಲಕ ಸ್ವಗ್ರಾಮ ಶ್ರೀನಿವಾಸಪುರಕ್ಕೆ ತೆರಳುತ್ತಿದ್ದಾಗ ಚಿಂತಾಮಣಿ ಶ್ರೀನಿವಾಸಪುರ ಮಾರ್ಗ ಮಧ್ಯೆ ಕೊದಡವಾಡಿ ಬಳಿ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಲ್ಲಿಸಿದ್ದ ಎತ್ತಿನಬಂಡಿಗೆ ಕತ್ತಲಲ್ಲಿ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ತೀವ್ರವಾಗಿ ಗಾಯಗೊಂಡಿದ್ದ ಅಂಬರೀಶ್ ರನ್ನ ಕೂಡಲೇ ಶ್ರೀನಿವಾಸಪುರ ಅಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆರ್ ಐ ಅಂಬರೀಶ್ ಮೃತಪಟ್ಟಿದ್ದಾರೆ.

ಅಂಬರೀಶ್ ಆಗಲಿಕೆಯಿಂದ ಕುಟುಂಬಸ್ಥರಲ್ಲಿ ದುಃಖ ಆವರಿಸಿದ್ದು, ತಹಶೀಲ್ದಾರ್ ಸೇರಿದಂತೆ ಕಚೇರಿಯ ಸಿಬ್ಬಂದಿ ಅಂಬರೀಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *