ಆಕಸ್ಮಿಕವಾಗಿ 40 ಅಡಿಯ ಪಾಳು ಬಾವಿಗೆ ಬಿದ್ದ ಕೃಷ್ಣ ಮೃಗ ರಕ್ಷಣೆ

– ಗ್ರಾಮಸ್ಥರು, ಅರಣ್ಯ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ

ಬೀದರ್: ಮೇಯಲು ಹೋದಾಗ ಆಕಸ್ಮಿಕವಾಗಿ 40 ಅಡಿಯ ಪಾಳು ಬಾವಿಗೆ ಎರಡು ಕೃಷ್ಣ ಮೃಗಗಳು ಬಿದ್ದಿದ್ದು, ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಬೀದರ್ ತಾಲೂಕಿನ ಔರಾದ್ ಸಿರ್ಸಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಎರಡು ಕೃಷ್ಣ ಮೃಗಗಳು ಬಾವಿಗೆ ಬಿದ್ದಿದ್ದನ್ನು ನೋಡುತ್ತಿದ್ದಂತೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಜಂಟಿ ಕಾರ್ಯಾರಚಣೆ ನಡೆಸಿ ಎರಡೂ ಕೃಷ್ಣ ಮೃಗಗಳನ್ನು ರಕ್ಷಿಸಿದ್ದಾರೆ. ಕಾರ್ಯಾಚರಣೆ ದೃಶ್ಯವನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಜಂಟಿಯಾಗಿ ಹರಸಾಹಸಪಟ್ಟು ಎರಡು ಕೃಷ್ಣ ಮೃಗಗಳ ರಕ್ಷಣೆ ಮಾಡಿದ್ದಾರೆ. ಸತತ ಒಂದು ಗಂಟೆಗಳ ಕಾಲ ರಕ್ಷಣೆ ಕಾರ್ಯಚರಣೆ ನಡೆಸಿದ್ದು, ಕೊನೆಗೂ ಎರಡೂ ಕೃಷ್ಣ ಮೃಗಗಳನ್ನು ರಕ್ಷಣೆ ಮಾಡಿ, ಅರಣ್ಯ ಅಧಿಕಾರಿಗಳು ಅವುಗಳನ್ನು ಕಾಡಿಗೆ ಬಿಟ್ಟಿದ್ದಾರೆ.

Comments

Leave a Reply

Your email address will not be published. Required fields are marked *