ಆಜಾದ್ ಕಿ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲರಿಗೆ ಆಮಂತ್ರಣ

ಬೆಂಗಳೂರು: ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ರಾಜ್ಯಪಾಲರಾದ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿ ನಾಳೆ ವಿದುರಾಶ್ವತ್ಥದಲ್ಲಿ ನಡೆಯಲಿರುವ ಆಜಾದಿ ಕಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲು ಆಮಂತ್ರಣ ನೀಡಿದರು.

ರಾಜಭವನದಲ್ಲಿ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಅರವಿಂದ ಲಿಂಬಾವಳಿ ಪುಷ್ಪ ಗುಚ್ಚವನ್ನು ನೀಡಿ, ನಾಳೆ ವಿದುರಾಶ್ವತ್ಥದಲ್ಲಿ ನಡೆಯಲಿರುವ ಆಜಾದಿ ಕಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಬೇಕಾಗಿ ಕೇಳಿಕೊಂಡರು. ಈ ಸಂದರ್ಭ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಜೊತೆಗಿದ್ದರು.

ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯದ ಮೂರು ಸ್ಥಳಗಳನ್ನು ಒಳಗೊಂಡಂತೆ ದೇಶದ 75 ಸ್ಥಳಗಳಲ್ಲಿ 75 ವಾರಗಳ ಕಾಲ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿಯನ್ನು ರಾಜ್ಯಪಾಲರೊಂದಿಗೆ ಸಚಿವರು ಮಾಹಿತಿ ಹಂಚಿಕೊಂಡರು.

Comments

Leave a Reply

Your email address will not be published. Required fields are marked *