ಆತ್ಮಹತ್ಯೆಗೆ ಶರಣಾದ ಚಿನ್ನದ ಮನುಷ್ಯ

ಗಾಂಧಿನಗರ: ಚಿನ್ನದ ಮನುಷ್ಯ ಎಂದು ಹೆಸರು ಪಡೆದಿರುವ ಕುಂಜಾಲ್ ಪಟೇಲ್ ಅಲಿಯಾಸ್ ಕೆ.ಪಿ ಪಟೇಲ್ ಗುಜರಾತಿನ ಅಹಮದಾಬಾದ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕುಟುಂಬದ ಜೊತೆ ನೆಡದ ಗಲಾಟೆ ಬಳಿಕ ತಾನೇ ಕುತ್ತಿಗೆ ಹಿಸುಕಿಕೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲಿಸ್ ಮೂಲಗಳಿಂದ ತಿಳಿದುಬಂದಿದೆ. ರಾಜಿಕೀಯ ಪಕ್ಷವೊಂದರ ಅಭ್ಯರ್ಥಿಯಾಗಿ ಕುಂಜಾಲ್ ಪಟೇಲ್, ದರಿಯಾಪುರ್ ಕ್ಷೇತ್ರದಿಂದ ಈ ಮುಂಚೆ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದನು. ಕೆಜಿಗಟ್ಟಲೇ ಚಿನ್ನಾಭರಣ ಧರಿಸಿದ್ದ ಕುಂಜಾಲ್ ಪಟೇಲ್ ಫೋಟೋ ವೈರಲ್ ಆಗಿ ಖ್ಯಾತಿಗಳಿಸಿದ್ದನು. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡುವ ಮೊದಲು ಶಾಲೆ ಆರಂಭ ಬೇಡ: ಪ್ರತಾಪ್ ಸಿಂಹ

ಆತ್ಮಹತ್ಯೆ ಸಂಬಂಧ ಅನುಮಾನವು ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿರುವ ಮಧುಪುರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕುಂಜಾಲ್ ಮಧುಪುರದ ಯೋಗೇಶ್ ಸೋಸೈಟಿಯಲ್ಲಿ ವಾಸವಿದ್ದನು. ಇತನ ಸಾವಿನ ಕುರಿತಾಗಿ ಅನುಮಾನಗಳಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *