ಆಶ್ರಯ ಮನೆ ಹಂಚಿಕೆಯಲ್ಲಿ ಅಕ್ರಮ ಆರೋಪ- ನ್ಯಾಯಕ್ಕಾಗಿ ಟವರ್ ಏರಿ ಕುಳಿತ ದಂಪತಿ

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ದಂಪತಿಗಳು ಮೊಬೈಲ್ ಟವರ್ ಏರಿ ಕುಳಿತ ಘಟನೆ ಜಿಲ್ಲೆಯ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ.

ಮೋಹನ್ ರಾಜ್ ಮತ್ತು ಚಂದನ ಮೊಬೈಲ್ ಟವರ್ ಏರಿ ಕುಳಿತ ದಂಪತಿ. ಬಂಟೇನಹಳ್ಳಿ ಗ್ರಾಮ ಪಂಚಾತಿಯಲ್ಲಿ ಆಶ್ರಯ ಮನೆ ನೀಡುವುದಾಗಿ ದಂಪತಿಯಿಂದ ಒಂದು ಸಾವಿರ ಹಣ ಪಡೆದಿರುವ ಆರೋಪ ಕೇಳಿ ಬಂದಿದೆ. ಆದರೆ ಕೊನೆಗೆ ದಂಪತಿಗೆ ಆಶ್ರಯ ಮನೆ ನೀಡದೆ ವಂಚನೆ ಮಾಡಿರುವುದಾಗಿ ಆರೋಪ ಮಾಡುತ್ತಿದ್ದಾರೆ.

ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುವುದಾಗಿ ದಂಪತಿ ಟವರ್ ಏರಿ ಕುಳಿತಿದ್ದಾರೆ. ಈ ಕುರಿತ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಟವರ್ ನಿಂದ ಕೆಳಗಿಳಿಯುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

Comments

Leave a Reply

Your email address will not be published. Required fields are marked *