ಇಂದು ರಾಜ್ಯದಲ್ಲಿ 8,642 ಮಂದಿಗೆ ಕೊರೊನಾ- 7,201 ಮಂದಿ ಗುಣಮುಖ

– 126 ಮಂದಿ ಕೋವಿಡ್ 19ಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು 8,642 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,49,590ಕ್ಕೆ ಏರಿಕೆಯಾಗಿದೆ.

ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ವಯ, ಇಂದು 126 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 4,327 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಂದು ರಾಜ್ಯದಲ್ಲಿ 7,201 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 2,49,590 ಸೋಂಕಿತರ ಪೈಕಿ 81,097 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 1,64,150 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 704 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು 30,399 ರ್ಯಾಪಿಡ್ ಟೆಸ್ಟ್ ನಲ್ಲಿ 32,686 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 63,085 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 5,82,124 ಮಂದಿಗೆ ರ್ಯಾಪಿಡ್ ಟೆಸ್ಟ್, 16,15,135 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 21,97,259 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು 2,804 ಮಂದಿಗೆ ಸೋಂಕು ದೃಢವಾಗಿದ್ದು, 56 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 96,910ಕ್ಕೆ ಏರಿಕೆ ಆಗಿದೆ. ಬೆಂಗಳೂರು ನಗರ 2,804, ಬಳ್ಳಾರಿ 537, ಬೆಳಗಾವಿ 379, ದಕ್ಷಿಣ ಕನ್ನಡ 234, ದಾವಣಗೆರೆ 228, ಧಾರವಾಡ 253, ಹಾಸನ 228, ಮೈಸೂರು 562, ಶಿವಮೊಗ್ಗ 915, ಉಡುಪಿ 375 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಒಟ್ಟು 10 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಬಾಗಲಕೋಟೆ 301, ಬಳ್ಳಾರಿ 629, ಬೆಳಗಾವಿ 267, ಬೆಂಗಳೂರು ಗ್ರಾಮಾಂತರ 63, ಬೆಂಗಳೂರು ನಗರ 2,549, ಬೀದರ್ 151, ಚಾಮರಾಜನಗರ 106, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 50, ಚಿತ್ರದುರ್ಗ 79, ದಕ್ಷಿಣ ಕನ್ನಡ 115, ದಾವಣಗೆರೆ 66, ಧಾರವಾಡ 351, ಗದಗ 167, ಹಾಸನ 148, ಹಾವೇರಿ 29, ಕಲಬುರಗಿ 247, ಕೊಡಗು 14, ಕೋಲಾರ 114, ಕೊಪ್ಪಳ 131, ಮಂಡ್ಯ 81, ಮೈಸೂರು 240, ರಾಯಚೂರು 159, ರಾಮನಗರ 120, ಶಿವಮೊಗ್ಗ 570, ತುಮಕೂರು 42, ಉಡುಪಿ 181, ಉತ್ತರ ಕನ್ನಡ 130, ವಿಜಯಪುರ 19 ಹಾಗೂ ಯಾದಗಿರಿಯಲ್ಲಿ 65 ಮಂದಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Comments

Leave a Reply

Your email address will not be published. Required fields are marked *