ಇಂದು 6,257 ಮಂದಿಗೆ ಸೋಂಕು – 6,473 ಡಿಸ್ಚಾರ್ಜ್‌

– 699 ಮಂದಿ ಐಸಿಯುನಲ್ಲಿ
– 86 ಮಂದಿ ಕೊರೊನಾಗೆ ಬಲಿ

ಬೆಂಗಳೂರು: ಕರ್ನಾಟಕದಲ್ಲಿ ಇಂದು 6,257 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 6,473 ಮಂದಿ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 86 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ ಒಟ್ಟು 1,88,611 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 1,05,599 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು 3,398 ಮಂದಿ ಮೃತಪಟ್ಟಿದ್ದಾರೆ.

ಇಂದು ಒಟ್ಟು 43,924 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 17,72,991 ಮಂದಿಗೆ ಕೋವಿಡ್‌ 19 ಪರೀಕ್ಷೆ ಮಾಡಲಾಗಿದೆ.

ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣ ಮತ್ತು ಸಾವು ಸಂಭವಿಸಿದೆ. ಬೆಂಗಳೂರಿನಲ್ಲಿ 1,610, ಬಳ್ಳಾರಿ 736, ಬೆಳಗಾವಿ 575, ಧಾರವಾಡ 276, ದಕ್ಷಿಣ ಕನ್ನಡದಲ್ಲಿ 243 ಮಂದಿಗೆ ಸೋಂಕು ಬಂದಿದೆ.

ಮೃತಪಟ್ಟವರ ಪೈಕಿ ಬೆಂಗಳೂರಿನಲ್ಲಿ 17, ಮೈಸೂರು 11, ಧಾರವಾಡ ಮತ್ತು ದಕ್ಷಿಣ ಕನ್ನಡ ತಲಾ 9 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 1508, ಮೈಸೂರು 647, ದಕ್ಷಿಣ ಕನ್ನಡ 519, ಶಿವಮೊಗ್ಗ 453 ಮಂದಿ ಬಿಡುಗಡೆಯಾಗಿದ್ದಾರೆ.

ಐಸಿಯುನಲ್ಲಿ ಒಟ್ಟು 699 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರ 329, ಹಾಸನ 41, ಧಾರವಾಡ 38, ಕಲಬುರಗಿ 31, ದಕ್ಷಿಣ ಕನ್ನಡ 28 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments

Leave a Reply

Your email address will not be published. Required fields are marked *