ಇದು ರಾಷ್ಟ್ರೀಯ ಭಯೋತ್ಪಾದನೆ – ಭಾರತದ ವಿರುದ್ಧ ಮುಂದುವರಿದ ವಿದೇಶಿ ಪಿತೂರಿ

ನವದೆಹಲಿ: ಭಾರತದ ವಿರುದ್ಧ ಅಂತಾರಾಷ್ಟ್ರೀಯ ಪಿತೂರಿ ಮುಂದುವರಿದಿದೆ. ರೈತರ ಹೋರಾಟ ದೇಶದ ಆಂತರಿಕ ವಿಚಾರ ಎಂದು ಕೇಂದ್ರ ಸರ್ಕಾರ ಹೇಳುತ್ತಿದ್ದರೂ ಅದನ್ನು ಕೇಳಿಸಿಕೊಳ್ಳೋಕೆ ಪಿತೂರಿದಾರರು ತಯಾರಿಲ್ಲ.  ಬದಲಿಗೆ ನಾಲಗೆ ಹರಿಬಿಡುವುದನ್ನು ಮುಂದುವರಿಸಿದ್ದಾರೆ. ಅದರಲ್ಲೂ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೊಸೆ, ವಕೀಲೆ ಮೀನಾ ಹ್ಯಾರೀಸ್ ಮಾಡುತ್ತಿರುವ ಟ್ವೀಟ್‍ಗಳು ಭಾರತದ ಘನತೆಗೆ ಮಸಿ ಬಳಿಯುವಂತಿವೆ.

https://twitter.com/meenaharris/status/1357772428982669312

ಇದು ಕೇವಲ ಕೃಷಿ ನೀತಿ ವಿಚಾರವಲ್ಲ. ಇದು ಧಾರ್ಮಿಕ ಅಲ್ಪಸಂಖ್ಯಾತರ ಕಿರುಕುಳ, ಪೊಲೀಸ್ ಹಿಂಸೆ, ರಾಷ್ಟ್ರೀಯ ಭಯೋತ್ಪಾದನೆ, ಕಾರ್ಮಿಕ ಹಕ್ಕುಗಳ ಮೇಲಿನ ದಾಳಿಗಳಿಗೆ ಸಂಬಂಧಿಸಿದ್ದು. ನಿಮ್ಮ ಆಂತರಿಕ ವ್ಯವಹಾರಗಳಿಂದ ದೂರ ಇರಲು ಹೇಳಬೇಡಿ.. ಇವೆಲ್ಲವೂ ನಮ್ಮ ಸಮಸ್ಯೆಗಳೇ ಎಂದು ಮೀನಾ ಹ್ಯಾರೀಸ್ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

https://twitter.com/meenaharris/status/1357784804750577665

ಅಷ್ಟೇ ಅಲ್ಲದೇ ಸಿಂಘು ಗಡಿಯಲ್ಲಿ ಅರೆಸ್ಟ್ ಆಗಿದ್ದ ನೊದೀಪ್ ಕೌರ್ ಎಂಬ ದಲಿತ ಕಾರ್ಯಕರ್ತೆಗೆ ಪೊಲೀಸ್ ಕಸ್ಟಡಿಯಲ್ಲಿ ಲೈಂಗಿಕ ಕಿರುಕುಳ ನೀಡಲಾಗ್ತಿದೆ. 20 ದಿನಗಳಿಂದ ಕೋರ್ಟ್‍ಗೂ ಹಾಜರುಪಡಿಸದೇ ಹಿಂಸೆ ನೀಡಲಾಗುತ್ತಿದೆ. ಭಾರತದಲ್ಲಿ ದಮನಕಾರಿ ಪ್ರವೃತ್ತಿ ಹೆಚ್ಚುತ್ತಿದೆ ಎಂದೆಲ್ಲಾ ಆರೋಪ ಮಾಡಿದ್ದಾರೆ.

ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ದೇಶದ್ರೋಹಿಗಳ ಒಂದು ಗುಂಪು ರೈತರ ಹಿಂದೆ ನಿಂತು ವ್ಯವಸ್ಥಿತ ಷಡ್ಯಂತ್ರ್ಯ ನಡೆಸಿದೆ ಎಂದು ಆರೋಪಿಸಿದ್ದಾರೆ. ಹಾಲಿವುಡ್, ಬಾಲಿವುಡ್ ನಟರೇನು ಉಳುಮೆ ಮಾಡಿದ್ದಾರಾ? ಸುಮ್ನೆ ಮೂಗು ತೂರಿಸ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ರೈತ ಹೋರಾಟದಲ್ಲಿ ವಿದೇಶಿ ಪಿತೂರಿ ಇಲ್ಲ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಸ್ಪಷ್ಟಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *