ಉತ್ತರ ಕನ್ನಡದಲ್ಲಿ ಭೂಕುಸಿತ- ಅಡಿಕೆ ತೋಟ ಸಂಪೂರ್ಣ ನಾಶ

ಕಾರವಾರ: ಬೇಸಿಗೆಯಲ್ಲೂ ಶಿರಸಿಯಲ್ಲಿ ಭೂಕುಸಿತವಾಗಿದ್ದು, ಅಡಿಕೆ ತೋಟ ಸಂಪೂರ್ಣ ನಾಶವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮತ್ತಿಘಟ್ಟದ ಕೆಳಗಿನಕೇರಿ ಗ್ರಾಮದಲ್ಲಿ ಇಂದು ಭೂ ಕುಸಿತವಾಗಿ ಜನರನ್ನು ಬೆಚ್ಚಿಬೀಳಿಸಿದೆ. ಕಳೆದ ವರ್ಷದ ಭಾರೀ ಮಳೆಯಿಂದಾಗಿ ಇಲ್ಲಿನ ಗುಡ್ಡಭಾಗದಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಇಂದು ದಿಢೀರ್ ಕುಸಿತಕಂಡಿದೆ.

ಭೂ ಕುಸಿತದಿಂದಾಗಿ ಮಧುಸೂದನ್ ಹೆಗಡೆ ಅವರಿಗೆ ಸೇರಿದ ಒಂದು ಎಕರೆ ಅಡಿಕೆ ತೋಟ ಸಂಪೂರ್ಣ ನಾಶವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, 15 ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

Comments

Leave a Reply

Your email address will not be published. Required fields are marked *