ಉತ್ತರ ಕರ್ನಾಟಕ ಅಭಿವೃದ್ಧಿ ಆಗ್ರಹಿಸಿ ಜ.20ರಿಂದ ಪಾದಯಾತ್ರೆ

ವಿಜಯಪುರ: ಬಸವನಾಡು ವಿಜಯಪುರದಿಂದ ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಆಗ್ರಹಿಸಿ ಪಾದಯಾತ್ರೆ ನಡೆಯಲಿದೆ. ಜನವರಿ 20 ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಯಿಂದ ಪಾದಯಾತ್ರೆ ಪ್ರಾರಂಭವಾಗಲಿದ್ದು, ಬೆಂಗಳೂರಿನವರೆಗೆ ಪಾದಯಾತ್ರೆ ನಡೆಯಲಿದೆ ಎಂದು ಉತ್ತರ ಕರ್ನಾಟಕ ರೈತರ ಅಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಯಾಸೀನ ಜವಳಿ ವಿಜಯಪುರದಲ್ಲಿ ತಿಳಿಸಿದರು.

ಉತ್ತರ ಕರ್ನಾಟಕ ರೈತರ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದ್ದು, ಸಂಘದ ನೂರಾರು ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಯಾಸೀನ ಜವಳಿ ಹೇಳಿದರು. ʻಉತ್ತರ ಕರ್ನಾಟಕಕ್ಕೆ ಉತ್ತರ ಕೊಡಿʼ ಎಂಬ ಘೋಷ ವಾಕ್ಯದೊಂದಿಗೆ ಪಾದಯಾತ್ರೆ ನಡೆಯಲಿದೆ. ಇನ್ನು ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಾದಯಾತ್ರೆಯಲ್ಲಿ ಉತ್ತರ ಕರ್ನಾಟಕದ ವಿವಿಧ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆಂದು ಯಾಸೀನ ಜವಳಿ ತಿಳಿಸಿದರು.

Comments

Leave a Reply

Your email address will not be published. Required fields are marked *