ಉಪ್ಪೂರು ಬೈಕಾಡಿಯಲ್ಲಿ ನೆರೆ ಭೀತಿ- ಸರ್ಕಾರ ಶಾಲೆ ಸುತ್ತ ನದಿ ನೀರು

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ಇಂದು ರೆಡ್, ಮುಂದಿನ ಮೂರು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯ ನದಿಗಳು ತುಂಬಿ ಹರಿಯುತ್ತಿದೆ. ಇನ್ನೆರಡು ದಿನ ಮಳೆ ಮುಂದುವರಿದರೆ ನದಿ ಸಾಲುಗಳಲ್ಲಿ ನೆರೆಯ ವಾತಾವರಣ ಸೃಷ್ಟಿಯಾಗಲಿದೆ. ಉಡುಪಿ ನಗರದಲ್ಲಿ ಹರಿಯುವ ಸ್ವರ್ಣ, ಸೀತಾ ನದಿ ತುಂಬಿ ಹರಿಯುತ್ತಿದೆ. ಕುಂದಾಪುರ ಬೈಂದೂರು ಕಾರ್ಕಳ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತ ಆಗಿದೆ.

ನದಿ ತೀರದಲ್ಲಿ ಮನೆಗಳನ್ನು ಕಟ್ಟಿ ಕೊಂಡವರಲ್ಲಿ ಕೊಂಚ ಆತಂಕ ಸೃಷ್ಟಿಯಾಗಿದೆ. ನದಿಪಾತ್ರದವರು ಎಚ್ಚರಿಕೆಯಿಂದ ಇರಬೇಕು, ನೀರಿನ ಮಟ್ಟ ಹೆಚ್ಚಾದರೆ ಇತರ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಲು ಸಿದ್ಧವಿರಬೇಕು ಎಂದು ಸ್ಥಳೀಯ ಆಡಳಿತಗಳು ಸಂದೇಶ ರವಾನಿಸಿದೆ.

ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗಿರುವುದರಿಂದ 50ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ. ನಾಡದೋಣಿ ಮೀನುಗಾರಿಕೆಯವರು ಕಡಲಿಗೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಬೈಕಾಡಿ, ಉಪ್ಪೂರು, ಹಕ್ಲಾಡಿ, ಹೈಕಾಡಿ ನಾವುಂದ ಬಡಾಕೆರೆ ಮತ್ತಿತರ ನದಿ ಪಾತ್ರದ ಭಾಗಗಳಲ್ಲಿ ನೆರೆಯ ವಾತಾವರಣ ಇದೆ.

Comments

Leave a Reply

Your email address will not be published. Required fields are marked *