ಎಚ್‍ಡಿಡಿ ದಂಪತಿ ಗುಣಮುಖರಾಗಲೆಂದು ವಿಶೇಷ ಪೂಜೆ

ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ದೇವೇಗೌಡ ಮತ್ತು ಕೊರೊನಾದಿಂದ ಬಳಲುತ್ತಿರುವ ಅವರ ಪತ್ನಿ ಚನ್ನಮ್ಮ ಗುಣಮುಖರಾಗಲೆಂದು ನಾಗಮಂಗಲದ ಶ್ರೀ ಸೌಮ್ಯಕೇಶವ ದೇವಸ್ಥಾನದಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹಾಗೂ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಎದೆಯಲ್ಲಿ ಸಣ್ಣ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೇವೇಗೌಡ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತ್ನಿ ಚನ್ನಮ್ಮ ಅವರನ್ನು ಇಲ್ಲೇ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಶೀಘ್ರವಾಗಿ ಇಬ್ಬರು ಗುಣಮುಖರಾಗಿ ಬರಬೇಕೆಂದು ಎಲ್.ಆರ್.ಶಿವರಾಮೇಗೌಡ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿಕೊಂಡರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಮೇಗೌಡರು, ನಾವು ದೇವೇಗೌಡ ಅವರ ಆಶೀರ್ವಾದದಲ್ಲಿ ಬೆಳೆದವರು, ಅವರಿಂದ ನಾವು ಅಧಿಕಾರ ಅನುಭವಿಸಿದ್ದೇವೆ. ಈ ರಾಜ್ಯದಲ್ಲಿ ಆರೋಗ್ಯವನ್ನು ಲೆಕ್ಕಿಸದೇ ರೈತರ ಪರವಾಗಿ ಹೋರಾಟ ಮಾಡುವ ವ್ಯಕ್ತಿ ಎಂದರೆ ದೇವೇಗೌಡರು. ಹೀಗಾಗಿ ಅವರು ಹಾಗೂ ಅವರ ಧರ್ಮಪತ್ನಿ ಆದಷ್ಟು ಬೇಗ ಗುಣಮುಖರಾಗಿ ಬರಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇನೆ ಎಂದು ಪ್ರತಿಕ್ರಿಯಿಸಿದರು.

Comments

Leave a Reply

Your email address will not be published. Required fields are marked *