ಎರಡು ಕಾರುಗಳ ಮಧ್ಯೆ ಡಿಕ್ಕಿ- ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿ

ನವದೆಹಲಿ: ಎರಡು ಕಾರುಗಳ ಮಧ್ಯೆ ಡಿಕ್ಕಿಯಾದ ನಂತರ ಚಾಲಕ ಇನ್ನೊಬ್ಬ ಚಾಲಕನ ಮೇಲೆ ಗುಂಡು ಹಾರಿಸಿರುವ ಘಟನೆ ಗಾಜಿಯಾಬಾದ್‍ನ ಥಾನಾ ಇಂದಿರಾಪುರಂ ಪ್ರದೇಶದ ರಸ್ತೆಮಾರ್ಗದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಆರೋಪಿಗಳಿಂದ ಹಲ್ಲೆಗೊಳಗಾದ ವ್ಯಕ್ತಿಯನ್ನು ಅಖಿಲೇಶ್ ಎಂದು ಗುರುತಿಸಲಾಗಿದೆ. ಬಿಲ್ಡರ್ ಅಖಿಲೇಶ್ ಶರ್ಮಾ ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಆಡಿ ಕಾರಿನಲ್ಲಿ ಸ್ನೇಹಿತನೊಂದಿಗೆ ನಿತಿ ಖಾಂಡ್ ಪ್ರದೇಶದಲ್ಲಿರುವ ಮನೆಗೆ ಬರುತ್ತಿದ್ದರು. ಈ ವೇಳೆ ಸ್ವಲ್ಪ ದೂರದಿಂದ ಮತ್ತೊಂದು ಕಾರು ಬಂದು ಆಡಿ ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ಇತರ ಕಾರಿನಲ್ಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಕಾರಿನಿಂದ ಇಳಿದು ಬಂದು ಅಖಿಲೇಶ್ ಮೇಲೆ ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಲಾರಂಭಿಸಿದ್ದಾರೆ. ಈ ವೇಳೆ ಸ್ನೇಹಿತರಿಬ್ಬರು ಭಯಗೊಂಡಿದ್ದಾರೆ. ಗುಂಡು ಹಾರಿಸಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ಬಗ್ಗೆ ಬಿಲ್ಡರ್ ಅಖಿಲೇಶ್ ಶರ್ಮಾ ಕೂಡಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.ಪೊಲೀಸರ ಪ್ರಕಾರ ರಸ್ತೆಯಲ್ಲಿ ಕಾರು ಸವಾರರ ನಡುವೆ ಸಣ್ಣ ಘರ್ಷಣೆ ನಡೆದಿದೆ. ಬಿಲ್ಡರ್‍ನ ಆಡಿ ಕಾರಿಗೆ ಆರೋಪಿಗಳು ತಮ್ಮ ಕಾರಿನಿಂದ ಡಿಕ್ಕಿ ಹೊಡೆದಿದ್ದಾರೆ ಮತ್ತು ಈ ವೇಳೆ ಗುಂಡು ಹಾರಿಸಿದ್ದಾರೆ. ಆರೋಪಿಗಳು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಗುಂಡಿನ ದಾಳಿಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Comments

Leave a Reply

Your email address will not be published. Required fields are marked *