ಎರಡು ಬೈಕ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ- ಇಬ್ಬರೂ ಸ್ಥಳದಲ್ಲೇ ಸಾವು

ವಿಜಯಪುರ: ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಕಾರಣ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾದ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದ ಬಳಿ ನಡೆದಿದೆ.

ಗುಂದವಾನ ಗ್ರಾಮದಿಂದ ಚಡಚಣಕ್ಕೆ ಹೊರಟಿದ್ದ ಅರಬಾಜ್ ಶೇಖ್(23) ಮತ್ತು ಗೋಡಿಹಾಳ ಗ್ರಾಮದ ರಾಜೇಂದ್ರ ಬಸಪ್ಪ ಕಾಂಬಳೆ(45) ಅಪಘಾತದಲ್ಲಿ ಮೃತರಾದ ದುರ್ದೈವಿಗಳು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದರಾಯ ಅವರಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಬಾಳೆಹಣ್ಣಿನ ಗದ್ದೆಗೆ ಬೆಂಕಿ ಹಚ್ಚಿದ ಅನ್ನದಾತ

ಸ್ಥಳಕ್ಕೆ ಚಡಚಣ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ. ಅಪಘಾತಕ್ಕೆ ಕಾರಣ ಹಾಗೂ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Comments

Leave a Reply

Your email address will not be published. Required fields are marked *