ಎಲ್ಲರೆದುರು ಸಿಟ್ಟಿನಿಂದ ಬೈಯ್ಯೋದು ಎಷ್ಟು ಸರಿ – ಮಂಜು ವಿರುದ್ಧ ದಿವ್ಯಾ ಅಸಮಾಧಾನ

ವಾರ ಬಿಗ್‍ಬಾಸ್ ಮನೆಯ ಸ್ಪರ್ಧಿಗಳಿಗೆ ಬಹಳ ಡಿಫರೆಂಟ್ ಟಾಸ್ಕ್‌ಗಳನ್ನು ನೀಡಿದ್ದಾರೆ. ಟಾಸ್ಕ್ ಆರಂಭಕ್ಕೂ ಮುನ್ನ ಮ್ಯೂಸಿಕ್ ವೊಂದನ್ನು ಪ್ಲೇ ಮಾಡಿದಾಗ ಎರಡು ತಂಡದ ಕ್ಯಾಪ್ಟನ್‍ಗಳು ಕನ್ಫೆಕ್ಷನ್ ರೂಮ್‍ಗೆ ಹೋಗಬೇಕಾಗುತ್ತದೆ.

ಈ ಮಧ್ಯೆ ಮಂಜು ತಮ್ಮ ತಂಡದ ಸದಸ್ಯರೊಂದಿಗೆ ಚರ್ಚೆ ನಡೆಸುತ್ತಿದ್ದ ವೇಳೆ ಮ್ಯೂಸಿಕ್ ಪ್ಲೇ ಆಗುತ್ತದೆ. ಆಗ ದಿವ್ಯಾ ಸುರೇಶ್ ನಿಧಾನವಾಗಿ ಡ್ಯಾನ್ಸ್ ಮಾಡುತ್ತಾ ಬರುತ್ತಾರೆ. ಇದನ್ನು ಕಂಡ ಮಂಜು ದಿವ್ಯಾ ಸುರೇಶ್‍ಗೆ ಬೇಗ ಬಾ ಎಂದು ರೇಗುತ್ತಾರೆ. ಇದರಿಂದ ಬೇಸರಗೊಂಡ ದಿವ್ಯಾ ಸುರೇಶ್ ಪ್ರಿಯಾಂಕ ಬಳಿ, ನಾನು ನಡೆದುಕೊಂಡು ಬರಬೇಕಾದರೆ ಮ್ಯೂಸಿಕ್ ಪ್ಲೇ ಆಯಿತು. ಅದಕ್ಕೆ ನಾನು ಡ್ಯಾನ್ಸ್ ಮಾಡಿಕೊಂಡು ಬರುತ್ತಿದ್ದೆ. ಅದಕ್ಕೆ ಬೇಗ ಬಾ ಏನು ಮಾಡುತ್ತಿದ್ಯಾ ಎಂದು ರೇಗುತ್ತಾರೆ. ನನ್ನ ಮೇಲೆ ರೇಗುವ ಅವಶ್ಯಕತೆ ಏನಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾವು ಫಸ್ಟ್ ಇನ್ನಿಂಗ್ಸ್‌ನಲ್ಲಿ ಹೇಗಿದ್ವಿ ಹಾಗೇ ಇರಲು ಸೆಕೆಂಡ್ ಇನ್ನಿಂಗ್ಸ್‌ನಲ್ಲಿ ಆಗುವುದಿಲ್ಲ ಎಂದು ಹೇಳಿದ್ದೆ ಅವನು, ಅವನು ಇರಲು ಆಗುವುದಿಲ್ಲ ಎಂದರೆ ನಾನು ಹಾಗೆಯೇ ಇರುವುದಕ್ಕೆ ಆಗುವುದಿಲ್ಲ. ನಾನು ಸುಮ್ಮನೆ ಒಬ್ಬಳೇ ಕುಳಿತುಕೊಳ್ಳಲು ಆಗುವುದಿಲ್ಲ, ನಾನು ಎಲ್ಲರ ಜೊತೆಯಲ್ಲಿ ಕೂಡ ಮಾತನಾಡಬೇಕಾಗುತ್ತದೆ, ಎಲ್ಲರ ಜೊತೆ ಬೆರೆಯಬೇಕಾಗುತ್ತದೆ. ಕೊಟ್ಟಿರುವ ಟಾಸ್ಕ್‌ಗಳನ್ನು ಮಾಡಬೇಕಾಗುತ್ತದೆ. ಸುದೀಪ್ ಸರ್ ಹೇಳಿದ್ರು, ನಾನು ಚೆನ್ನಾಗಿ ಆಟ ಆಡುತ್ತಿದ್ದೇನೆ ಅಂತ, ನಾನು ಕೂಡ ಅದನ್ನೇ ಮಾಡಬೇಕಾಗುತ್ತದೆ. ಸುಮ್ಮನೆ ನನ್ನ ಮೇಲೆ ರೇಗಾಡಿದ, ಅದರ ಅವಶ್ಯತೆ ಇರಲಿಲ್ಲ ಎಂದು ಹೇಳುತ್ತಾರೆ.

ಅವನು ಶುಭಾ ಜೊತೆ ಬಹಳ ಕ್ಲೋಸ್ ಆಗಿದ್ದಾನೆ. ಅವನು ಕುಳಿತು ಹೋದ ಬಿನ್ ಬ್ಯಾಗ್ ಮೇಲೆ ಕುಳಿತುಕೊಳ್ಳಲು ನಾನು ಎಷ್ಟು ಯೋಚಿಸುತ್ತೇನೆ ಗೊತ್ತಾ. ನಾನು ನೀನು ಯಾಕೆ ಅಷ್ಟು ಕ್ಲೋಸ್ ಆಗಿದ್ಯಾ ಅಂತ ಒಂದು ಕಂಪ್ಲೇಟ್ ಕೂಡ ಮಾಡಿಲ್ಲ, ನಿನ್ನ ಲೈಫ್, ನೀನು ಏನು ಬೇಕಾದರೂ ಮಾಡಬಹುದು, ಹಾಗೆಯೇ ನನ್ನ ಲೈಫ್ ನಾನು ಏನು ಬೇಕಾದರೂ ಮಾಡಬಹುದು. ನಾನು ಏನು ಮಾಡಿಲ್ಲ ಆದರೂ ಎಲ್ಲರೆದುರು ಸಿಟ್ಟಿನಿಂದ ಬೈಯುವುದು ಎಷ್ಟು ಸರಿ ನಿನ್ನೆ ಕೂಡ ಹೀಗೆ ಮಾಡಿದ ಕಣ್ಣೀರಾಕಿದ್ದಾರೆ. ಇದನ್ನೂ ಓದಿ: ಶಮಂತ್ ಒಂದು ದಾರಿಯಲ್ಲಿ ನಡೆದು ಬಿಟ್ರೆ, ನಾನು ಚಾಲೆಂಜ್ ಮಾಡ್ತೇನೆ: ಚಕ್ರವರ್ತಿ

Comments

Leave a Reply

Your email address will not be published. Required fields are marked *