ಏಕಾಏಕಿ ಬೈಕ್‌ ಸವಾರನ ಮೇಲೆ ಕಾಡಾನೆ ದಾಳಿ – ಪ್ರಾಣಾಪಾಯದಿಂದ ಪಾರು

ಆನೇಕಲ್‌: ಕಾಡಾನೆಯೊಂದು ಏಕಾಏಕಿ ಬೈಕ್ ಸವಾರನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಗಿಹಳ್ಳಿ ಬಳಿ ನಡೆದಿದೆ.

ಕೋಟಿಗೆರೆ ನಿವಾಸಿಯಾದ ಗಣೇಶ್(28) ಗಾಯಗೊಂಡಿರುವ ವ್ಯಕ್ತಿ. ಶನಿವಾರ ರಾತ್ರಿ 8 ಗಂಟೆಯ ವೇಳೆ ರಾಗಿಹಳ್ಳಿಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಆನೆ ದಾಳಿ ಮಾಡಿದೆ. ವಿಚಾರ ತಿಳಿದ ಸ್ಥಳೀಯ ನಿವಾಸಿಗಳು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಸಹಾಯ ಮಾಡಿದ್ದಾರೆ.

ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಗಿಹಳ್ಳಿ ಬಹುತೇಕ ಕಾಡು ಪ್ರದೇಶವಾಗಿದ್ದು ಆಗಾಗ ಈ ಗ್ರಾಮಗಳಲ್ಲಿ ಆನೆಗಳ‌ ಬುರವುದು ಸರ್ವೇ ಸಾಮಾನ್ಯವಾಗಿದೆ. ಸ್ಥಳೀಯರು ಸಾಕಷ್ಟು ಬಾರಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಈ ಭಾಗದಲ್ಲಿ ಸಾಮಾನ್ಯವಾಗಿ ಆನೆಗಳು ಆಗಾಗ ದಾಳಿ ಯಾಗುತ್ತಿದ್ದು ಯಾವುದೇ ಕ್ರಮಕೈಗೊಳ್ಳದ ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಂಚಿನ ಗ್ರಾಮಗಳ ನಿವಾಸಿಗಳ ಮೇಲೆ ಪ್ರತಿನಿತ್ಯ ಕಾಡು ಪ್ರಾಣಿಗಳು ದಾಳಿ ಮಾಡುತ್ತಿವೆ ಇಷ್ಟಾದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

Comments

Leave a Reply

Your email address will not be published. Required fields are marked *