ಕಂದಾಯ ಸಚಿವ ಅಶೋಕ್‌ ಹೋಂ ಕ್ವಾರಂಟೈನ್‌

ಬೆಂಗಳೂರು: ಕಳೆದ ಗುರುವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ.

ಭಾನುವಾರ ರಾತ್ರಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಸಿಎಂ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಅವರನ್ನು ಭೇಟಿಯಾಗಿದ್ದ ಆರ್ ಅಶೋಕ್ ಅವರು ಮುಂಜಾಗೃತ ಕ್ರಮವಾಗಿ ಸ್ವಯಂ ಕ್ವಾರಂಟೈನ್ ಆಗುವುದಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅವರು ಆದಷ್ಟು ಶೀಘ್ರದಲ್ಲಿ ಗುಣಮುಖರಾಗಿ ಬರಲೆಂದು ಭಗವಂತನಲ್ಲಿ ಪ್ರಾರ್ಥಿಸುವೆ. ಮುಖ್ಯಮಂತ್ರಿಗಳನ್ನು ನಾನು ಜುಲೈ 30 ಗುರುವಾರದಂದು ಮೆಟ್ರೊ ಉದ್ಘಾಟನೆಯ ವೇಳೆ ಭೇಟಿಯಾಗಿದ್ದೆ. ಈವರೆಗೆ ನನಗಾಗಲಿ, ನನ್ನ ಜೊತೆ ಕೆಲಸ ಮಾಡುವ ಸಿಬ್ಬಂದಿಗಾಗಲಿ ಸೋಂಕಿನ ಯಾವ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಮುಂಜಾಗ್ರತೆಯ ದೃಷ್ಟಿಯಿಂದ ನಾನು ಸ್ವಯಂ ಕ್ವಾರಂಟೈನ್ ಆಗಲಿದ್ದೇನೆ ಎಂದು ತಿಳಿಸಿದ್ದಾರೆ.

ಈಗಾಗಲೇ ಆರ್ ಅಶೋಕ್ ಅವರು ಮೂರು ದಿನಗಳ ಕಾಲ ಮನೆಯಲ್ಲೇ ಉಳಿದಿದ್ದಾರೆ. ಈ ಇದರ ಜೊತೆಗೆ ಇನ್ನೂ ನಾಲ್ಕು ದಿನ ಮನೆಯಲ್ಲೇ ಕ್ವಾರಂಟೈನ್ ಆಗಲು ಸಚಿವರು ನಿರ್ಧಾರ ಮಾಡಿದ್ದಾರೆ. ಆಶೋಕ್ ಅವರು ಮುಂದಿನ ಗುರುವಾರದವರೆಗೆ ಕ್ವಾರಂಟೈನ್ ಆಗಲಿದ್ದಾರೆ.

Comments

Leave a Reply

Your email address will not be published. Required fields are marked *