ಕಗ್ಗೆರೆ ಗವಿಮಠದ ತೋಂಟದಾರ್ಯ ಸ್ವಾಮೀಜಿ ಲಿಂಗೈಕ್ಯ

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಕಗ್ಗೆರೆ ಗವಿಮಠದ ತೋಂಟದಾರ್ಯ ಸ್ವಾಮೀಜಿ(80) ಇಂದು ಲಿಂಗೈಕ್ಯರಾಗಿದ್ದಾರೆ.

ಶ್ರೀಗಳಿಗೆ ಕಳೆದ ಭಾನುವಾರ ಹೃದಯಾಘಾತವಾಗಿತ್ತು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಕಗ್ಗೆರೆಯ ಗವಿಮಠದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇಂದು ಸಂಜೆ 6 ಗಂಟೆಗೆ ವೀರಶೈವ ಸಂಪ್ರದಾಯದಂತೆ ಗಮಿಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಿದ್ದಗಂಗಾ ಶ್ರೀಗಳು, ಸತ್ತೂರು ಶ್ರೀಗಳು ಸೇರಿದಂತೆ ನಾಡಿನ ಹಲವು ಸಾಧುಸಂತರು ಅಂತಿಮ ದರ್ಶನ ಪಡೆದಿದ್ದಾರೆ. ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರ ಆರಾಧ್ಯ ಕ್ಷೇತ್ರ ಇದಾಗಿದ್ದು, ತೋಂಟದಾರ್ಯ ಶ್ರೀಗಳು ದಾಸೋಹ, ಸಮಾಜ ಸೇವೆಯಲ್ಲಿ ಸದಾ ಮುಂದೆ ಇದ್ದರು.

Comments

Leave a Reply

Your email address will not be published. Required fields are marked *