ಕಬಿನಿಯಲ್ಲಿ ಒಳ ಹರಿವು ಹೆಚ್ಚಳ – ಕಪಿಲಾ ನದಿ ಪಾತ್ರದ ಜನತೆಯಲ್ಲಿ ಪ್ರವಾಹದ ಆತಂಕ

– ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

ಮೈಸೂರು: ಕೇರಳದ ವೈನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಂಜನಗೂಡಿನಲ್ಲಿ ಕಪಿಲಾ ನದಿ ಮೈದುಂಬಿ ಹರಿಯುತ್ತಿದೆ.

ಕೇರಳದಲ್ಲಿ ಹೆಚ್ಚು ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಹೀಗಾಗಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡುಗಡೆ ಮಾಡಲಾಗಿದೆ. ಜಲಾಶಯದಿಂದ ಹೆಚ್ಚು ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಕಬಿನಿ ಜಲಾಶಯದ ಒಳ ಹರಿವು ಹೆಚ್ಚಾದ ಪರಿಣಾಮ ನಂಜನಗೂಡಿನ ಕಪಿಲಾ ನದಿ ಸ್ನಾನಘಟ್ಟ ಮುಳುಗಡೆಯಾಗಿದೆ. ಅಲ್ಲದೇ ಇಂದು ಮತ್ತು ನಾಳೆ ಇನ್ನೂ ನದಿಯ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ನಂಜನಗೂಡಿನ ತೋಪಿನ ಬೀದಿ, ಹಳ್ಳದಕೇರಿ, ಕುರುಬಗೇರಿ, ಮೇದರಗೇರಿ, ಸರಸ್ವತಿ ಕಾಲೋನಿ ಸೇರಿದಂತೆ ವಿವಿಧ ಬಡಾವಣೆಗಳ ಜನತೆಯಲ್ಲಿ ಆತಂಕ ಉಂಟಾಗಿದೆ.

ಕಳೆದ ಬಾರಿ ಪ್ರವಾಹದಿಂದ ನೂರಾರು ಕುಟುಂಬಕ್ಕೆ ಸಮಸ್ಯೆಯಾಗಿತ್ತು. ಮನೆ ಮುಳುಗಿ ಅನೇಕು ಕುಟುಂಬಗಳು ಬೀದಿಗೆ ಬಂದಿದ್ದವು. ಇದೀಗಾ ಮತ್ತೆ ಕುಟುಂಬಗಳು ಪ್ರವಾಹ ಉಂಟಾಗಬಹುದು ಎಂಬ ಆತಂಕದಲ್ಲಿದ್ದಾರೆ.

ಕಬಿನಿ ಜಲಾಶಯದ ಇಂದಿನ ಒಳಹರಿವು 38 ಸಾವಿರ ಕ್ಯೂಸೆಕ್ ಆಗಿದ್ದು, ಜಲಾಶಯದ ಇಂದಿನ ಹೊರಹರಿವು ಒಟ್ಟು 40 ಸಾವಿರ ಕ್ಯೂಸೆಕ್ ಆಗಿದೆ. ನಾಲೆಗಳಿಗೆ 600 ಕ್ಯೂಸೆಕ್, ನದಿಗೆ 21,458 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯದ ಇಂದಿನ ನೀರಿನ ಮಟ್ಟ 79.87 ಅಡಿಯಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿ ಆಗಿದೆ. ಜಲಾಶಯ ಒಟ್ಟು 19.52 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಜಲಾಶಯದಲ್ಲಿಂದು 16.97 ಟಿಎಂಸಿ ನೀರು ಸಂಗ್ರಹವಾಗಿದೆ.

Comments

Leave a Reply

Your email address will not be published. Required fields are marked *