ಕರೆ ಮಾಡಿದ್ರೂ ಬಾರದ ಅಂಬುಲೆನ್ಸ್ – ರಾತ್ರಿಯೆಲ್ಲ ಆಟೋದಲ್ಲಿ ಆಸ್ಪತ್ರೆಗೆ ಅಲೆದು ಶಿಕ್ಷಕಿ ಸಾವು

– ಕೊರೊನಾ ವಾರಿಯರ್ ಆಗಿದ್ದ ಶಿಕ್ಷಕಿ

ಬೆಂಗಳೂರು: ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಕೊರೊನಾ ವಾರಿಯರ್ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ.

ಬೆಂಗಳೂರಿನ ಡಿಜೆ ಹಳ್ಳಿಯಲ್ಲಿರುವ ಸರ್ಕಾರಿ ಉರ್ದು ಮಾದರಿ ಶಾಲೆಯಲ್ಲಿ ಕೋವಿಡ್-19 ಸರ್ವೇ ಕಾರ್ಯ ಮಾಡುತ್ತಿದ್ದ ಶಿಕ್ಷಕಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಶಿಕ್ಷಕಿ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ರಾತ್ರಿ ಪೂರ್ತಿ ಆಕ್ಸಿಜನ್ ಸಿಲಿಂಡರ್ ಜೊತೆ ಆಟೋದಲ್ಲಿ ಆಸ್ಪತ್ರೆಗೆ ಅಲೆದು ಕೊನೆಗೆ ಸಾವನ್ನಪ್ಪಿದ್ದಾರೆ.

ಕೊರೊನಾ ಸರ್ವೇ ಮಾಡುತ್ತಿದ್ದ ಶಿಕ್ಷಕಿಗೆ ಮೂರು ದಿನದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರ ಅವರಿಗೆ ಕೊರೊನಾ ಇರುವುದು ದೃಢಪಟ್ಟಿತ್ತು. ಆದರೆ ಕಳೆದ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಆಗ ಅಂಬುಲೆನ್ಸ್ ಗೆ ಎಷ್ಟೇ ಕರೆ ಮಾಡಿದರೂ ಬಂದಿಲ್ಲ. ಈ ವೇಳೆ ಅವರೇ ಆಟೋದಲ್ಲಿ ಐದಾರು ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. ಆದರೆ ಅವರಿಗೆ ಎಲ್ಲೂ ಬೆಡ್ ಸಿಕ್ಕಿಲ್ಲ. ಕೊನೆಗೆ ಅವರನ್ನು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ ಶಿಕ್ಷಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Comments

Leave a Reply

Your email address will not be published. Required fields are marked *