ಕರ್ನಾಟಕ ಸೇರಿ 6 ರಾಜ್ಯಗಳ ಬಡಮಕ್ಕಳಿಗೆ ಕ್ರಿಕೆಟ್ ದಿಗ್ಗಜ ಸಹಾಯ

ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಕರ್ನಾಟಕ ಸೇರಿ 6 ರಾಜ್ಯಗಳ 100 ಮಂದಿ ಬಡಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವ ಮೂಲಕ ಸಹಾಯ ಮಾಡಲು ಮುಂದಾಗಿದ್ದಾರೆ.

ಹೌದು. ಸಚಿನ್ ತೆಂಡೂಲ್ಕರ್ ಫೌಂಡೇಶನ್ ಮತ್ತು ಏಕಮ್ ಫೌಂಡೇಶನ್ ಜೊತೆಯಾಗಿ ಸರ್ಕಾರಿ ಮತ್ತು ಟ್ರಸ್ಟ್ ಆಸ್ಪತ್ರೆಗಳಲ್ಲಿ ಗಂಭೀರ ಕಾಯಲೆಗಳಿಂದ ಬಲಳುತ್ತಿರುವ ಹಾಗೂ ಆಸ್ಪತ್ರೆಗಳಲ್ಲಿ ದುಬಾರಿ ವೆಚ್ಚ ಭರಿಸಲಾಗದೇ ಪರದಾಡುತ್ತಿರುವ ಕಡುಬಡಕುಟುಂಬದ ಮಕ್ಕಳಿಗೆ ನೆರವಾಗಲಿದೆ. ಸಚಿನ್ ಅವರು ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ಬಡ ಕುಟುಂಬದ ಮಕ್ಕಳಿಗೆ ಆರ್ಥಿಕವಾಗಿ ಸಹಾಯ ಮಾಡಲಿದ್ದಾರೆ.

ಈ ಸಂಬಂಧ ಮಾತನಾಡಿರುವ ಏಕಮ್ ಫೌಂಡೇಶನ್ ಮ್ಯಾನೇಜಿಂಗ್ ಪಾರ್ಟ್ನರ್ ಅಮಿತಾ ಚಟರ್ಜಿ ಮಾತನಾಡಿ, ಸಚಿನ್ ಅವರ ಫೌಂಡೇಶನ್ ಜೊತೆಗೂಡಿ ನಾವು ಕೂಡ ಉತ್ತಮ ಕೆಲಸಗಳಲ್ಲಿ ತೊಡಗಿಕೊಂಡಿದ್ದೇವೆ. ಆರೋಗ್ಯದ ವಿಚಾರದಲ್ಲಿ ಸಚಿನ್ ಅವರು ಬಹಳ ಕಾಳಜಿ ವಹಿಸುತ್ತಾರೆ. ಶ್ರೀಮಂತರು ಮಾತ್ರವಲ್ಲ ಬಡವರಿಗೂ ಉತ್ತಮ ಗುಣಮಟ್ಟದ ಆರೋಗ್ಯ ಸಿಗಬೇಕು ಎಂಬುದು ಅವರ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಡಿಸೆಂಬರ್ ಆರಂಭದಲ್ಲಿ ಸಚಿನ್ ಫೌಂಡೇಶನ್ ನಿಂದ ಅಸ್ಸಾಂನ ಕರಿಂಗಂಜ್ ಆಸ್ಪತ್ರೆಗೆ ವಿವಿಧ ವೈದ್ಯಕೀಯ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಗಿತ್ತು. ಸುಮಾರು 2 ಸಾವಿರ ಮಕ್ಕಳು ಇದರ ಪ್ರಯೋಜನ ಪಡೆಯುವ ನಿರೀಕ್ಷೆ ಇದೆ.

ವಿಶ್ವಮಕ್ಕಳ ದಿನಾಚರಣೆಯಂದು ಸಚಿನ್ ಅವರು ಯುನಿಸೆಫ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಶ್ವದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳನ್ನು ಪ್ರಮುಖ ಪಾತ್ರ ವಹಿಸುವಂತೆ ಪ್ರೋತ್ಸಾಹಿಸಿದರು.

Comments

Leave a Reply

Your email address will not be published. Required fields are marked *