ಕಲಾಗ್ರಾಮದಲ್ಲಿ ಕವಿ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ- ಸರ್ಕಾರದ ಪರ ಅಂತಿಮ ನಮನ ಅರ್ಪಿಸಿದ ಡಿಸಿಎಂ

ಬೆಂಗಳೂರು: ರಾಜ್ಯ ಕಂಡ ಶ್ರೇಷ್ಠ ಸಾಹಿತಿ. ದಮನಿತರ ದನಿಯಾಗಿದ್ದವರು ಡಾ.ಸಿದ್ದಲಿಂಗಯ್ಯ. ಅವರ ನಿಧನ ಬಹಳ ನೋವಿನ ಸಂಗತಿ. ತಮ್ಮ ಬದುಕು, ನೋವುಗಳನ್ನೇ ಸಾಹಿತ್ಯವಾಗಿ ಬರೆದವರು ಅವರು ಎಂದು ಸರ್ಕಾರದ ಪರ ಅಂತಿಮ ನಮನ ಅರ್ಪಿಸಿ ಡಿಸಿಎಂ ಅಶ್ವಥ್ ನಾರಾಯಣ್ ಅವರು ಅಭಿಪ್ರಯಾಪಟ್ಟರು. ಇದನ್ನೂ ಓದಿ:  ನಿಮ್ಮ ಜೇಬು ತುಂಬಿದ್ರೆ ಸಾಕೆ?, ಬಡವರ ಸ್ಥಿತಿ ಏನಾಗ್ಬೇಕು?: ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಪ್ರಶ್ನೆ

ಕೋವಿಡ್‍ನಿಂದ ಶುಕ್ರವಾರ ನಿಧನರಾದ ಕವಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆಯಿತು. ಸರ್ಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅವರಿಗೆ ಅಂತಿಮ ವಿದಾಯ ಹೇಳಲಾಯಿತಲ್ಲದೆ, ಸರ್ಕಾರದ ಪರವಾಗಿ ಡಿಸಿಎಂ ಅವರು, ಅಂತಿಮ ನಮನ ಸಲ್ಲಿಸಿ ಗೌರವ ಸಮರ್ಪಣೆ ಮಾಡಿದರು. ಅವರ ಜತೆಯಲ್ಲಿ ಶಾಸಕ ಮುನಿರತ್ನ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅಗಲಿದ ಚೇತನಕ್ಕೆ ನಮನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಡಾ.ಸಿದ್ದಲಿಂಗಯ್ಯ, ಅವರ ನಿಧನ ಬಹಳ ನೋವಿನ ಸಂಗತಿ. ತಮ್ಮ ಬದುಕು, ನೋವುಗಳನ್ನೇ ಸಾಹಿತ್ಯವಾಗಿ ಬರೆದವರು ಅವರು. ಎರಡು ಅವಧಿಗಳಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಸದನದಲ್ಲಿ ವಿಚಾರ ಮಂಡನೆ, ಚರ್ಚೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದರು. ನಮಗೆಲ್ಲ ಮಾರ್ಗದರ್ಶಕರಾಗಿದ್ದರು. ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ನೆರವೇರಿಸಲಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ನಾವೆಲ್ಲರೂ ಪ್ರಾರ್ಥನೆ ಮಾಡೋಣ ಎಂದು ಡಿಸಿಎಂ ಹೇಳಿದರು.

Comments

Leave a Reply

Your email address will not be published. Required fields are marked *