ಕಲ್ಯಾಣ ಮಂಟಪಗಳಿಗೆ ದಿಢೀರ್ ಭೇಟಿ – ಮಾಸ್ಕ್ ಧರಿಸದವರಿಗೆ ದಂಡ

ಹಾಸನ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕಂದಾಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಇಂದು ಕಲ್ಯಾಣ ಮಂಟಪಗಳಿಗೆ ತೆರಳಿ ಎಚ್ಚರಿಕೆ ನೀಡಿದರು.

ಹಾಸನ ನಗರದ ಕಲ್ಯಾಣ ಮಂಟಪಗಳಿಗೆ ಕಂದಾಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿದರು. ಈ ವೇಳೆ ಸಾರ್ವಜನಿಕರಿಗೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿ ಹೇಳಿದರು.

ಗುಂಪು ಗುಂಪಾಗಿ ಕುಳಿತಿದ್ದ ಜನರಿಗೆ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸಿ ಸೂಚನೆಗಳನ್ನು ನೀಡಲಾಯಿತು. ನಗರಸಭೆ ಪೌರಾಯುಕ್ತರಾದ ಕೃಷ್ಣಮೂರ್ತಿ, ಮುನಿಸಿಪಲ್ ತಹಶೀಲ್ದಾರ್ ರಮೇಶ್‍ರವರ ನೇತೃತ್ವದ ತಂಡದಿಂದ ಮಾಸ್ಕ್ ಧರಿಸದೇ ಇರುವವರಿಗೆ ಸ್ಥಳದಲ್ಲೇ ದಂಡ ವಿಧಿಸಲಾಯಿತು. ಊಟದ ಹಾಲ್‍ನಲ್ಲೂ ಸಹಾ ಒಂದು ಟೇಬಲ್‍ಗೆ ಎರಡು ಕುರ್ಚಿಗಳಿರುವಂತೆ ಹಾಕಿಸಲಾಯಿತು.

Comments

Leave a Reply

Your email address will not be published. Required fields are marked *