ಕಸ ವಿಲೇವಾರಿ ಕಾರ್ಮಿಕನ ಮೇಲೆ ಹಲ್ಲೆ- ಎಲೆಕ್ಟ್ರಾನಿಕ್ಸ್ ಶಾಪ್ ಪರವಾನಿಗೆ ರದ್ದು

ಉಡುಪಿ: ಕಸ ವಿಲೇವಾರಿಗೆ ಬಂದ ನಗರಸಭೆ ಪೌರಕಾರ್ಮಿಕನಿಗೆ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರಸಭೆ ಖಂಡನಾ ನಿರ್ಣಯ ತೆಗೆದುಕೊಂಡು, ಎಲೆಕ್ಟ್ರಾನಿಕ್ಸ್ ಶಾಪ್ ಮಾಲೀಕನ ಪರವಾನಿಗೆಯನ್ನು ರದ್ದುಗೊಳಿಸಿದೆ.

ಜಿಲ್ಲೆಯ ನಗರಸಭೆ ಕಸ ವಿಲೇವಾರಿ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಉಡುಪಿ ನಗರಸಭೆ ಖಡಕ್ ನಿರ್ಣಯ ತೆಗದುಕೊಂಡಿದೆ. ಉಡುಪಿ ನಗರಸಭೆಯಲ್ಲಿ ನಡೆದ ತುರ್ತು ಖಂಡನಾ ನಿರ್ಣಯ ಸಭೆಯಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಆಸ್ಮಾ ಕ್ಯಾಸೆಟ್ ಕಾರ್ನರ್ ಅಂಗಡಿಯ ವ್ಯಾಪಾರ ಪರವಾನಿಗೆ ರದ್ದು ಮಾಡಲು ನಿರ್ಣಯಿಸಲಾಗಿದೆ.

ಅಧಿಕಾರಿಗಳು, ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿ, ಗುತ್ತಿಗೆ ನೌಕರರ ರಕ್ಷಣೆಗೆ ಆಡಳಿತ ವಿಭಾಗ ಬದ್ಧವಾಗಿದ್ದು, ಕೆಲವರು ಅನಗತ್ಯವಾಗಿ ನಗರಸಭೆ ವಿರುದ್ಧ ಪೌರಕಾರ್ಮಿಕರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಷಡ್ಯಂತ್ರಕ್ಕೆ ಅವಕಾಶ ಇಲ್ಲ ಎಂದು ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್ ಮಾತನಾಡಿ, ಸರ್ಕಾರಿ ಅಧಿಕಾರಿಗಳ ವಿರುದ್ಧ ದುವರ್ತನೆ ತೋರಿದರೆ ಪಕ್ಷ ಭೇದವಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದ ಸದಸ್ಯರು ಬೀದಿಯಲ್ಲಿ ನಿಂತು ಮಾತನಾಡುವ ಬದಲು ಅಧಿವೇಶನಕ್ಕೆ ಬಂದು ತಮ್ಮ ಅಭಿಪ್ರಾಯ ಮಂಡಿಸಬೇಕಿತ್ತು ಕಿಡಿಕಾರಿದರು.

Comments

Leave a Reply

Your email address will not be published. Required fields are marked *