ಕಾಂಗ್ರೆಸ್ ಅಧಿಕಾರದಲ್ಲಿ ಇರದಿದ್ದಾಗ ಬೆಂಕಿ ಹಚ್ಚೋ ಕೆಲಸ ಮಾಡುತ್ತೆ: ನಳಿನ್

ಹಾವೇರಿ: ಕಾಂಗ್ರೆಸ್ ಅಧಿಕಾರದಲ್ಲಿ ಇರದಿದ್ದಾಗ ಬೆಂಕಿ ಹಚ್ಚುವ ಕೆಲಸ ಮಾಡುತ್ತೆ. ಈ ಹಿಂದೆಯೂ ಮಾಡಿದೆ, ಈಗಲೂ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದರು. ಇದನ್ನೂ ಓದಿ: ಮಾಜಿ ಸಿಎಂ ಆಗಿ ಗೌರವಯುತವಾಗಿ ನಡೆದುಕೊಳ್ಳುವಂತೆ ಸಿದ್ದುಗೆ ನಳಿನ್ ಸಲಹೆ

ನಗರದಲ್ಲಿ ಮಾತನಾಡಿದ ನಳಿನ್ ಕುಮಾರ್, ದಿವಂಗತ ಸುರೇಶ್ ಅಂಗಡಿ ಮತ್ತು ನಾನು ಆತ್ಮೀಯರು. ಅವರು ಏನೇ ಇದ್ದರೂ ನನಗೆ ಹೇಳುತ್ತಿದ್ದರು. ಸಿಎಂ ಬದಲಾವಣೆ ವ್ಯವಸ್ಥೆ ಇಲ್ಲವೇ ಇಲ್ಲ. ಈ ಬಗ್ಗೆ ಎಲ್ಲಿಯೂ ಚರ್ಚೆಗಳು ನಡೆದಿಲ್ಲ. ಹೀಗಾಗಿ ಸಿಎಂ ಬದಲಾವಣೆ ಇಲ್ಲ. ಉಳಿದ ಮೂರು ವರ್ಷದ ಅವಧಿಯಲ್ಲಿ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನೂ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು. ಸೂಕ್ತ ಕಾಲಘಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ರೈತರು ಸೋಮವಾರ ಕರ್ನಾಟಕ ಬಂದ್ ಮಾಡಿದ್ದರು. ಹೀಗಾಗಿ ಕಾಂಗ್ರೆಸ್ ನಿನ್ನೆ ರೈತರ ಪರವಾಗಿ ಹೋರಾಟ ಮಾಡಿತ್ತು. ಆದರೆ ನಿನ್ನೆಯ ಹೋರಾಟದ ಮೂಲಕ ಕಾಂಗ್ರೆಸ್ ವಿಫಲವಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಇರದಿದ್ದಾಗ ಬೆಂಕಿ ಹಚ್ಚುವ ಕೆಲಸ ಮಾಡುತ್ತೆ. ಈ ಹಿಂದೆಯೂ ಮಾಡಿದೆ, ಈಗಲೂ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದರು.

ರೈತಪರವಾದ ಮಸೂದೆಗಳ ವಿರುದ್ಧ ಕಾಂಗ್ರೆಸ್ ರೈತರನ್ನ ಎತ್ತಿಕಟ್ಟುವ ಕೆಲಸ ಮಾಡುತ್ತಿದೆ. ಈ ಮೂಲಕ ಕಾಂಗ್ರೆಸ್ ಹೀನ ರಾಜಕಾರಣ ಮಾಡುತ್ತಿದೆ. ಈಗ ಜಾರಿಗೆ ತಂದಿರುವ ಮಸೂದೆಯಿಂದ ಬಿಜೆಪಿಗೆ ಲಾಭ ಆಗುತ್ತೆ ಅಂತ ಕಾಂಗ್ರೆಸ್ ರೈತರನ್ನ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದಲ್ಲಾಳಿಗಳ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆ ಎಂದರು.

Comments

Leave a Reply

Your email address will not be published. Required fields are marked *