ಕಾರಿಗೆ ಬಸ್ ಡಿಕ್ಕಿ- ಐವರು ದುರ್ಮರಣ, 18 ಮಂದಿ ಗಂಭೀರ

ಲಕ್ನೋ: ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.

ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಅಪಘಾತ ಸಂಭವಿಸಿದೆ. ಬಸ್ ಬಿಹಾರದ ದರ್ಭಂಗದಿಂದ ದೆಹಲಿಗೆ ಹೋಗುತ್ತಿತ್ತು. ಅಪಘಾತವಾದ ನಂತರ ಗಾಯಾಳುಗಳನ್ನು ಸ್ಥಳೀಯರು ಮತ್ತು ಪೊಲೀಸರು ರಕ್ಷಿಸಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

“ಖಾಸಗಿ ಬಸ್ ದರ್ಭಾಂಗದಿಂದ ದೆಹಲಿಗೆ ಹೋಗುತ್ತಿತ್ತು. ಆದರೆ ಉತ್ತರ ಪ್ರದೇಶದ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೇಗವಾಗಿ ಹೋಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಸ್ಥಳಲದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ಅಮ್ರೇಂದ್ರ ಪ್ರತಾಪ್ ಸಿಂಗ್ ತಿಳಿಸಿದರು.

ಅಪಘಾತದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ರಕ್ಷಣಾ ಪಡೆ ತಕ್ಷಣ ಸ್ಥಳಕ್ಕೆ ಹೋಗಿದ್ದಾರೆ. ಅಲ್ಲದೇ ಗಾಯಗೊಂಡವನ್ನು ರಕ್ಷಣೆ ಮಾಡಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Comments

Leave a Reply

Your email address will not be published. Required fields are marked *