ಕಾಶಿ ವಿಶ್ವನಾಥ ದೇವಾಲಯ, ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆಗೆ ಆದೇಶ

ಲಕ್ನೋ: ಕಾಶಿ ವಿಶ್ವನಾಥ ದೇವಸ್ಥಾನ – ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಪುರಾತತ್ವ ಇಲಾಖೆಗೆ ಮಹತ್ವದ ಆದೇಶ ನೀಡಿದೆ.

1664 ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ 2 ಸಾವಿರ ವರ್ಷಗಳಷ್ಟು ಹಳೆಯದಾದ ಕಾಶಿ ವಿಶ್ವನಾಥ ದೇವಾಲಯದ ಒಂದು ಭಾಗವನ್ನು ಕೆಡವಿ ಅಲ್ಲಿ ಮಸೀದಿ ನಿರ್ಮಿಸಿದ್ದಾನೆ. ಹೀಗಾಗಿ ಈ ಜಾಗ ಹಿಂದೂಗಳಿಗೆ ಸೇರಬೇಕು. ಈ ಜಾಗದಲ್ಲಿ ಮೊದಲು ದೇವಾಲಯ ಇತ್ತೋ? ಮಸೀದಿ ನಿರ್ಮಾಣವಾಗಿತ್ತೋ ಎಂಬುದನ್ನು ತಿಳಿಯಲು ಸಮೀಕ್ಷೆ ನಡೆಸಲು ಅನುಮತಿ ನೀಡಬೇಕೆಂದು ವಕೀಲ ವಿಜಯ್ ಶಂಕರ್ ರಸ್ತೋಗಿ ಅರ್ಜಿ ಮೂಲಕ ಮನವಿ ಸಲ್ಲಿಸಿದ್ದರು.

ಈ ಜಾಗದಲ್ಲಿ ಸಮೀಕ್ಷೆ ನಡೆಸುವುದಕ್ಕೆ ಮಸೀದಿಯ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿ 2020ರಲ್ಲಿ ಅರ್ಜಿ ಸಲ್ಲಿಸಿತ್ತು. ಈಗ ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಸಮೀಕ್ಷೆ ನಡೆಸುವಂತೆ ಪುರಾತತ್ವ ಇಲಾಖೆಗೆ ಸೂಚಿಸಿದೆ. ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಖರ್ಚುಗಳನ್ನು ಉತ್ತರ ಪ್ರದೇಶ ಸರ್ಕಾರ ಭರಿಸಬೇಕೆಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಶೀಘ್ರವೇ ಒಂದು ಸಮಿತಿಯನ್ನು ರಚಿಸಿ ಸಮೀಕ್ಷೆ ನಡೆಸುವ ಸಾಧ್ಯತೆಯಿದೆ.

Comments

Leave a Reply

Your email address will not be published. Required fields are marked *