ಕುಟುಂಬ ಸಮೇತ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರು ಇಂದು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀಕ್ಷೇತ್ರ ಧರ್ಮಸ್ಥಳದ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಡಿಕೆಶಿ, ಪತ್ನಿ, ಮಗಳು, ಅಳಿಯ ಸೇರಿದಂತೆ ಕುಟುಂಬ ಸಮೇತರಾಗಿ ಬಂದಿಳಿದರು. ಇದೊಂದು ಖಾಸಗಿ ಕಾರ್ಯಕ್ರಮ, ಧರ್ಮಸ್ಥಳದ ವೈದ್ಯರನ್ನು ಭೇಟಿಯಾಗಲು ಬಂದಿರುವುದಾಗಿ ತಿಳಿಸಿದರು.

ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್‌ರವರು, ಬ್ಲ್ಯಾಕ್ ಫಂಗಸ್ ಬಗ್ಗೆ ಮಂತ್ರಿಗಳಲ್ಲೇ ಗೊಂದಲ ಇದೆ. ಒಬ್ಬರು ಇದೆ ಅಂತಾರೆ, ಮತ್ತೊಬ್ಬರು ಇಲ್ಲ ಅಂತಾ ಹೇಳುತ್ತಾರೆ. ಫಂಗಸ್‍ಗೆ ಔಷಧಗಳು ಇಲ್ಲ ಅಂತಾ ಮಾಧ್ಯಮಗಳು ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಗುಜರಾತಿಗೆ ಔಷಧ ಕಳಿಸಿಕೊಟ್ಟಿದೆ. ಹಾಗಾಗಿ ನಮ್ಮ ರಾಜ್ಯ ಸರ್ಕಾರ ಗುಜರಾತಿನಿಂದಾದರೂ ಔಷಧ ತರಬೇಕಾಗಿದೆ. ಈಗಾಗಲೇ ಭಯಗೊಂಡಿರುವ ಜನರನ್ನು ರಾಜ್ಯ ಸರ್ಕಾರ ಗೊಂದಲಕ್ಕೀಡು ಮಾಡುವ ಕೆಲಸ ಮಾಡುತ್ತಿದೆ ಎಂದರು.

ಈ ಸಂದರ್ಭ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಜೊತೆಗಿದ್ದರು.

Comments

Leave a Reply

Your email address will not be published. Required fields are marked *