ಕುಮಾರಧಾರ ನದಿಗೆ ಮೀನು ಹಿಡಿಯಲು ಹೋಗಿದ್ದ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ದೊಳ್ತಿಲ ಎಂಬಲ್ಲಿ ಕುಮಾರಧಾರ ನದಿಗೆ ಮೀನು ಹಿಡಿಯಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿತ್ತು. ಇಂದು ಆತ ನಾಪತ್ತೆಯಾಗಿದ್ದ ಸ್ವಲ್ಪ ದೂರದಲ್ಲಿ ಮೃತದೇಹ ನದಿ ನೀರಿನಲ್ಲಿ ಪತ್ತೆಯಾಗಿದೆ.

ಮೃತ ಯುವಕನನ್ನು ದೊಳ್ತಿಲ ರಾಮಣ್ಣ ನಾಯ್ಕ್ ಅವರ ಪುತ್ರ ಪ್ರಕಾಶ್ (26) ಎಂದು ಗುರುತಿಸಲಾಗಿದೆ. ಪ್ರಕಾಶ್ ಹಾಗೂ ತನ್ನ ಸ್ನೇಹಿತರಿಬ್ಬರ ಜೊತೆ ಮೀನು ಹಿಡಿಯಲು ಬಿಟ್ಟಿದ್ದ. ಬಲೆಯನ್ನು ಈಜಿ ತರುತ್ತಿರುವಾಗ ನೀರಿನ ರಭಸಕ್ಕೆ ಕೊಚ್ಚಿ ಕೊಂಡು ಹೋಗಿದ್ದು ನಾಪತ್ತೆಯಾಗಿದ್ದ. ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳದ ಅಧಿಕಾರಿಗಳು, ಬೆಳ್ಳಾರೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನು ಓದಿ: ಕರಾವಳಿಯಲ್ಲಿ ಭಾರೀ ಮಳೆ- ತುಂಬುತ್ತಿರುವ ಜಿಲ್ಲೆಯ ಜೀವನದಿಗಳು

Comments

Leave a Reply

Your email address will not be published. Required fields are marked *