ಕೃಷಿ ಕಾಯಿದೆ ಖಂಡಿಸಿ ರಾಜಭವನ ಚಲೋ – ಬುಧವಾರ ರಸ್ತೆಗೆ ಇಳಿಯುವ ಮುನ್ನ ಬಿ ಅಲರ್ಟ್

ಬೆಂಗಳೂರು: ಕೇಂದ್ರ ಕೃಷಿ ಕಾಯಿದೆ ವಿರೋಧಿಸಿ ಬುಧವಾರ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು, ರೈತ ಸಂಘಟನೆಗಳು ರಾಜಭವನ ಚಲೋ ನಡೆಸಲಿದ್ದಾರೆ. ಬೆಳಗ್ಗೆ ಹನ್ನೊಂದು ಗಂಟೆಗೆ ಮೆಜೆಸ್ಟಿಕ್ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿಯಿಂದ ರ‍್ಯಾಲಿ ಶುರುವಾಗಲಿದೆ. ಮೆಜೆಸ್ಟಿಕ್‍ನಿಂದ ಫ್ರೀಡಂ ಪಾರ್ಕ್ ಮಾರ್ಗವಾಗಿ ಸಾಗಿ ರಾಜಭವನ ತಲುಪಲಿದೆ.

ಕಾಂಗ್ರೆಸ್ ಪಕ್ಷದ ನಾಯಕರು, ರೈತ ಸಂಘಟನೆಗಳು ಸೇರಿದಂತೆ ಹದಿನೈದು ಸಾವಿರಕ್ಕೂ ಹೆಚ್ಚು ಜನರು ಈ ರ‍್ಯಾಲಿಯಲ್ಲಿ ಭಾಗಿಯೋ ಸಾಧ್ಯತೆ ಇದೆ. ರಾಜಭವನ ಚಲೋಗೆ ಪೊಲೀಸರು ಕೂಡ ಎಲ್ಲ ರೀತಿಯ ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಆದ್ರೆ ನಗರದ ಹೃದಯ ಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರೋದರಿಂದ ಮೆಜೆಸ್ಟಿಕ್ ಸುತ್ತಲಿನ ಕೆ.ಜಿ.ರೋಡ್, ಚಿಕ್ಕಪೇಟೆ ಮುಖ್ಯರಸ್ತೆ, ಫ್ರೀಡಂ ಪಾರ್ಕ್ ರಸ್ತೆ, ಚಾಲುಕ್ಯ ಸರ್ಕಲ್, ಮೌರ್ಯ ಸರ್ಕಲ್, ಕೆಆರ್ ಸರ್ಕಲ್ ಸೇರಿದಂತೆ ಪ್ರಮುಖ ರಸ್ತೆ ಗಳು ಫುಲ್ ಜಾಮ್ ಆಗುವ ಸಾಧ್ಯತೆಗಳಿವೆ ಪರಿಸ್ಥಿತಿ ನೋಡಿಕೊಂಡು ಮಾರ್ಗಬದಲಾಣೆ ಬಗ್ಗೆ ಸೂಕ್ತ ತಿರ್ಮಾನ ಕೈಗೊಳ್ಳಲಾಗುವುದು ಅಂತಾ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ರಾಜಭವನ ಚಲೋಗೆ ಯಾವುದೇ ರೀತಿಯ ಅನುಮತಿ ಇಲ್ಲ. ಆದರೆ ರ‍್ಯಾಲಿ ಮಾಡುವ ಬಗ್ಗೆ ಅನುಮತಿ ಕೋರಿ ಪತ್ರ ಬಂದಿದ್ದು, ಇನ್ನೂ ಪರಿಶೀಲನೆ ಹಂತದಲ್ಲಿದೆ. ಕೊರೋನಾ ನಿಯಮಗಳು ಇನ್ನೂ ಜಾರಿಯಲ್ಲಿರೋದರಿಂದ ಮಾರ್ಗಸೂಚಿಗಳನ್ನು ಎಲ್ಲರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಬಂದೊಬಸ್ತ್, ಮಾರ್ಗ ಬದಲಾವಣೆ ಬಗ್ಗೆ ಹಿರಿಯ ಅಧಿಕಾರಿಗಳು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಸಾವಿರಾರು ಜನರು ಭಾಗವಹಿಸೋದರಿಂದ ಮೆಜೆಸ್ಟಿಕ್, ವಿಧಾನಸೌಧಸುತ್ತಮುತ್ತಲಿನ ರಸ್ತೆಗಳು ಸ್ತಬ್ಧ ಆಗೋ ಸಾಧ್ಯತೆಗಳು ಹೆಚ್ಚಾಗಿದೆ. 10 ಗಂಟೆಯ ನಂತರ ರಸ್ತೆಗಿಳಿದ್ರೆ ಟ್ರಾಫಿಕ್ ನಲ್ಲಿ ಲಾಕ್ ಅಗೋದು ಪಕ್ಕಾ.

Comments

Leave a Reply

Your email address will not be published. Required fields are marked *