ಕೆಂಪುಕೋಟೆಯಲ್ಲಿ ರೈತರಿಂದ ರಾಷ್ಟ್ರಧ್ವಜಕ್ಕೆ ಅವಮಾನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ.

ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ರೈತರು ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದಾರೆ. ಮುತ್ತಿಗೆ ಹಾಕಿದ್ದು ಮಾತ್ರವಲ್ಲದೇ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕಿದ್ದ  ಜಾಗದಲ್ಲಿ ಕಿಸಾನ್‌ ಯೂನಿಯನ್‌ ಧ್ವಜ ಮತ್ತು ಮೇಲ್ಭಾಗದಲ್ಲಿ ಸಿಖ್ ‌ಧ್ವಜವನ್ನು ಹಾರಿಸಲಾಗಿದೆ. ಧ್ವಜಕಂಬವನ್ನು ಹತ್ತಿದ್ದ ವ್ಯಕ್ತಿಗೆ ಆರಂಭದಲ್ಲಿ ರಾಷ್ಟ್ರಧ್ವಜವನ್ನು ನೀಡಲಾಗಿತ್ತು. ಆದರೆ ಆತ ರಾಷ್ಟ್ರ ಧ್ವಜವನ್ನು ಎಸೆದಿದ್ದಾನೆ.

https://twitter.com/sharo_hit/status/1354017958708690945

ಪ್ರತಿವರ್ಷ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನದಂದು ಪ್ರಧಾನಿ ರಾಷ್ಟ್ರಧ್ವಜವನ್ನು ಹಾರಿಸಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಪ್ರಧಾನಿ ರಾಷ್ಟ್ರಧ್ವಜವನ್ನು ಹಾರಿಸುತ್ತಿದ್ದ ಜಾಗದ ಪಕ್ಕದಲ್ಲೇ ಇದೇ ಮೊದಲ ಬಾರಿಗೆ ಪ್ರತಿಭಟನಾ ಧ್ವಜ ಹಾರಿದೆ.

ಇತಿಹಾಸದಲ್ಲಿ ಮೊದಲ ಬಾರಿಗೆ ಕೆಂಪುಕೋಟೆಗೆ ಮುತ್ತಿಗೆ ಹಾಕಿದ ರೈತರು ರಾಷ್ಟ್ರಧ್ವಜ ಹಾರಿಸುವ ಜಾಗದ ಸಮೀಪದಲ್ಲೇ ತಮ್ಮ ಬಾವುಟವನ್ನು ಹಾರಿಸಿದ್ದಾರೆ. ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜ ಬಿಟ್ಟು ಬೇರೆ ಧ್ವಜವನ್ನು ಹಾರಿಸುವಂತಿಲ್ಲ. ಇದು ವಿಶ್ವ ಪಾರಂಪರಿಕ ತಾಣವು ಆಗಿರುವುದರಿಂದ ಪ್ರತಿಭಟನೆಯ ಹೆಸರಿನಲ್ಲಿ ರೈತರು ತಮ್ಮ ಸಂಘಟನೆಯ ಧ್ವಜವನ್ನು ಇಲ್ಲಿ ಹಾರಿಸಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

Comments

Leave a Reply

Your email address will not be published. Required fields are marked *