ಕೆಸಿ ವ್ಯಾಲಿ ಪೈಪ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮುತ್ತಿರೋ ನೀರು

– ಕಳೆದ ರಾತ್ರಿಯಿಂದ ನೀರು ಪೋಲು

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಲ್ಲಿ ನೀರು ಪೋಲಾಗುತ್ತಿದರೂ ಅಧಿಕಾರಿಗಳು ಗಮನಹರಿಸದೆ ಬೇಜವಾಬ್ದಾರಿತನ ತೋರಿಸುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಕೆ.ಸಿ.ವ್ಯಾಲಿ ನೀರು ಪೂರೈಕೆ ಮಾಡುವ ಪೈಪ್ ಒಡೆದು ಹೋಗಿದ್ದು, ಆಕಾಶದೆತ್ತರಕ್ಕೆ ನೀರು ಚಿಮ್ಮುತ್ತಿರುವ ದೃಶ್ಯಗಳು ಕೋಲಾರದಲ್ಲಿ ಕಂಡು ಬಂದಿದೆ. ಕೋಲಾರ ತಾಲೂಕಿನ ಚಿಟ್ನಹಳ್ಳಿ ಗ್ರಾಮದ ಬಳಿ ಕೆ.ಸಿ.ವ್ಯಾಲಿ ನೀರು ಪೂರೈಕೆಯ ಗೇಟ್ ಪೈಪ್ ಒಡೆದು ಹೋಗಿದ್ದು, ನೀರು ಪೋಲಾಗುತ್ತಿದೆ.

ಕಳೆದ ರಾತ್ರಿ ಪೈಪ್ ಒಡೆದು ಹೋಗಿದ್ದು, ಆಕಾಶದೆತ್ತರಕ್ಕೆ ಸುಮಾರು 60 ಅಡಿ ಎತ್ತರಕ್ಕೆ ನೀರು ಚಿಮ್ಮುತ್ತಿದೆ. ಅಲ್ಲದೆ ಕಳೆದ ರಾತ್ರಿಯಿಂದಲೂ ನೀರು ಪೋಲಾಗುತ್ತಿದ್ದರೂ ಸಹ ದುರಸ್ಥಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಅಂತರ್ಜಲಮಟ್ಟ ಹೆಚ್ಚಿಸುವ ಸಲುವಾಗಿ ಅನೇಕ ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು ಹರಿಸಲಾಗುತ್ತಿದೆ. ಈ ನೀರನ್ನ ರೈತರು ಬಳಕೆ ಮಾಡಿಕೊಂಡರೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ ಕಳೆದ ರಾತ್ರಿಯಿಂದ ನೀರು ಪೋಲಾಗುತ್ತಿದ್ದರೂ ದುರಸ್ಥಿ ಮಾಡದೆ ಬೇಜವಾಬ್ದಾರಿತನ ತೋರುತ್ತಿದ್ದಾರೆಂದು ಎಂದು ಸ್ಥಳೀಯರು ಆರೋಪಿಸಿದ್ದಾರೆ.

Comments

Leave a Reply

Your email address will not be published. Required fields are marked *