ಕೆ.ಆರ್.ಎಸ್ ಡ್ಯಾಮ್‍ನಲ್ಲಿ ಲೀಕೇಜ್ ಇಲ್ಲ: ಮುರುಗೇಶ್ ನಿರಾಣಿ

ತುಮಕೂರು: ಕೆ.ಆರ್.ಎಸ್ ಡ್ಯಾಮ್‍ನಲ್ಲಿ ಯಾವುದೇ ಲೀಕೇಜ್ ಇಲ್ಲ, ಈ ಬಗ್ಗೆ ಆತಂಕ ಪಡುವಂತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಂಡವಪುರ ಪಕ್ಕದಲ್ಲಿ ಬೇಬಿ ಬೆಟ್ಟ ಇದೆ, ಅಲ್ಲಿ 10 ಕಿಮೀ ವ್ಯಾಪ್ತಿಯಲ್ಲಿ ಎಲ್ಲಾ ಗಣಿಗಾರಿಕೆಗಳನ್ನು ಮುಚ್ಚಿಸಲಾಗಿದೆ. ಕೆ.ಆರ್.ಎಸ್. ಸುತ್ತಮುತ್ತಲಿನ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ಮೈನಿಂಗ್ ಅನ್ನು ಬಂದ್ ಮಾಡಿದ್ದೀವಿ. ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಮೈನಿಂಗ್ ನಡೆದಿಲ್ಲ. ಆದರೂ ಈ ಸಂಬಂಧ ತನಿಖೆ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ:  ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

ಡ್ಯಾಮ್ ನಲ್ಲಿ ಯಾವುದೇ ಲೀಕೇಜ್ ಇಲ್ಲ, ಕೆ.ಆರ್.ಎಸ್ ಬಗ್ಗೆ ಆತಂಕ ಪಡುವಂತಿಲ್ಲ. ಆದರೂ ದೂರದೃಷ್ಟಿಯಿಂದ ಮುಂಜಾಗ್ರತವಾಗಿ ನೋಟಿಸ್ ಕೊಟ್ಟು ಮುಚ್ಚಿಸಲಾಗಿದೆ ಎಂದರು.

Comments

Leave a Reply

Your email address will not be published. Required fields are marked *