ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ

ಕೊಪ್ಪಳ: ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು ವಿಷಸೇವಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕುಲಕರ್ಣಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದ್ರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಗ್ರಾಮದಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸಂತೋಷ್ ಕುಲಕರ್ಣಿ ಎಂಬವರಿಂದ ಮೂರು ಲಕ್ಷ ದೋಚಿದ್ರು. ಈ ಸಂಬಂಧ 2016 ರಲ್ಲಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಗಂಗಾ ಕುಲಕರ್ಣಿ ವಿರುದ್ಧ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ಕೆ.ಕಲ್ಯಾಣ್ ಕುಟುಂಬಕ್ಕೆ ಮೋಸ- ಆರೋಪಿ ಪೊಲೀಸ್ ಕಸ್ಟಡಿಗೆ

ಈ ಹಿಂದೆ ಕಲ್ಯಾಣ್ ಪತ್ನಿ ಅಶ್ವಿನಿಯನ್ನು ಅತ್ತೆ, ಮಾವನನ್ನು ಪುಸಲಾಯಿಸಿ ಅಪಹರಣ ಮಾಡಿದ್ದಾರೆ. ಪತ್ನಿ ಅಶ್ವಿನಿ ಅಕೌಂಟ್‍ನಿಂದ 19 ಲಕ್ಷ ರೂಪಾಯಿ ತನ್ನ ಅಕೌಂಟ್‍ಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂಬ ಆರೋಪಿಸಲಾಗಿತ್ತು. ಈ ಆರೋಪ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ಗ್ರಾಮದ ಶಿವಾನಂದ ವಾಲಿ, ಗಂಗಾ ಕುಲಕರ್ಣಿ ಎಂಬವರ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಲ್ಯಾಣ್ ಪತ್ನಿ ಅಶ್ವಿನಿ ಕರೆತಂದು ಪೊಲೀಸರು ಮಾಹಿತಿ ಪಡೆದಿದ್ದರು. ಸದ್ಯ ಪತಿ ವಿರುದ್ಧ ನೀಡಿರುವ ವಿಚ್ಛೇದನ ಹಿಂಪಡೆಯುವುದಾಗಿ ಅಶ್ವಿನಿ ತಿಳಿಸಿದ್ದು, ಪ್ರಕರಣ ಸುಖಾಂತ್ಯಗೊಂಡಿದೆ.

Comments

Leave a Reply

Your email address will not be published. Required fields are marked *