ಕೇರಳ ಗಡಿಗೆ ಚಾಮರಾಜನಗರ ಡಿಸಿ ದಿಢೀರ್ ಭೇಟಿ

ಚಾಮರಾಜನಗರ: ಕೇರಳ ರಾಜ್ಯದಿಂದ ಬರುತ್ತಿರುವ ಸರಕು ಸಾಗಾಣಿಕೆ, ಸಾರ್ವಜನಿಕರ ವಾಹನಗಳು ಸೇರಿದಂತೆ ಎಲ್ಲಾ ಬಗೆಯ ವಾಹನ ತಪಾಸಣೆಯನ್ನು ವೀಕ್ಷಿಸಿದ ಚಾಮರಾಜನಗರ ಡಿ.ಸಿ ಡಾ.ಎಂ.ಆರ್.ರವಿ ರಾಜ್ಯಕ್ಕೆ ಬರುವವರು ಕೋವಿಡ್ ಟೆಸ್ಟ್ ವರದಿ ತರಬೇಕು. ಎಲ್ಲಾ ವಾಹನಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು ಎಂದು ಚೆಕ್‍ ಪೋಸ್ಟ್ ಸಿಬ್ಬಂದಿಗೆ ಸೂಚಿಸಿದ್ದಾರೆ.

ಕೊರೊನಾ ಡೆಲ್ಟಾ ಪ್ಲಸ್ ಕಟ್ಟೆಚ್ಚರದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೇರಳ ಗಡಿ ಮೂಲೆಹೊಳೆ ಚೆಕ್‍ ಪೋಸ್ಟ್ ಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದರು.

ಕೇರಳದಿಂದ ಬರುವವರು ಕಡ್ಡಾಯವಾಗಿ 72 ಗಂಟೆಯ ಒಳಗಡೆ ಮಾಡಿಸಿರುವ ಕೋವಿಡ್ ಟೆಸ್ಟ್ ರಿಪೋರ್ಟ್ ಅಥವಾ 1 ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ತರುವವರಿಗೆ ಮಾತ್ರ ರಾಜ್ಯ ಪ್ರವೇಶಕ್ಕೆ ಅವಕಾಶ ಕೊಡಿ, ಯಾವುದೇ ಕಾರಣಕ್ಕೂ ವರದಿ ಇಲ್ಲದವರನ್ನು ಬಿಡಬೇಡಿ. ಆರ್‌ಟಿ-​ಪಿಸಿಆರ್ ಪರೀಕ್ಷೆಯ ವರದಿಯನ್ನು ವಾಹನಗಳ ದಾಖಲಾತಿ ಪುಸ್ತಕದಲ್ಲಿ ನಮೂದಿಸಬೇಕು. ವರದಿ ಇಲ್ಲದೇ ಬಂದವರನ್ನು ವಾಪಸ್ ಕಳುಹಿಸಿದ ಮಾಹಿತಿಯನ್ನೂ ಬರೆಯಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂಗಳ ಮುಖಿಯರಿಂದ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ

Comments

Leave a Reply

Your email address will not be published. Required fields are marked *