ಕೇಶ್ವಾಪೂರ ಪೊಲೀಸರ ಕಾರ್ಯಾಚರಣೆ- ಇಬ್ಬರು ಗಾಂಜಾ ಮಾರಾಟಗಾರರ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚುವಲ್ಲಿ ಕೇಶ್ವಾಪೂರ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ.

ಸ್ಯಾಮುವೆಲ್ ಏಸು ಬಿಲ್ಲಾ ಮತ್ತು ನವೀನಕುಮಾರ್ ಪುರಷೋತ್ತಮ ಏಸುಮಾಲ್ ಬಂಧಿತ ಆರೋಪಿಗಳು. ಬಂಧಿತರಿಂದ 250 ಗ್ರಾಂ ತೂಕದ 25-ಸಣ್ಣ ಸಣ್ಣ ಪ್ಲಾಸ್ಟಿಕ್ ಪ್ಯಾಕೆಟುಗಳು ಹಾಗೂ 290 ನಗದು ವಶಪಡಿಸಿಕೊಂಡಿದ್ದಾರೆ. ಕೇಶ್ವಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Comments

Leave a Reply

Your email address will not be published. Required fields are marked *