ಕೊಟ್ಟ ಮಾತು ತಪ್ಪಿದ ಸರ್ಕಾರ- ನಾಳೆ ಬೆಂಗ್ಳೂರಲ್ಲಿ ಆಶಾಕಾರ್ಯಕರ್ತೆಯರ ಬೃಹತ್ ಧರಣಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಆಶಾ ಕಾರ್ಯಕರ್ತೆಯರು ನಾಳೆ ಬೆಂಗಳೂರಿನಲ್ಲಿ ಬೃಹತ್ ಧರಣಿ ನಡೆಸಲಿದ್ದಾರೆ.

ಮಾಸಿಕ ಏರಿಕೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಶಾ ಕಾರ್ಯಕರ್ತೆಯರು ಧರಣಿ ಮಾಡಲಿದ್ದಾರೆ. ದುಡಿಯುವ ವರ್ಗದ ನೋವು ತಿಳಿಸಲು ಆಶಾ ಕಾರ್ಯಕರ್ತೆಯರು ಬೀದಿಗಿಳಿಯಲಿದ್ದು, ರಾಜ್ಯ ಮಟ್ಟದ ಆಶಾ ಕಾರ್ಯಕರ್ತರ ಪ್ರತಿಭಟನೆ ನಡೆಯಲಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ತಿಳಿಸಿದ್ದಾರೆ.

ಸಾಂಧರ್ಬಿಕ ಚಿತ್ರ

ಕೊರೊನಾ ಸಂಕಷ್ಟದ ನಡುವೆಯೂ ಆಶಾ ಕಾರ್ಯಕರ್ತೆಯರು ಮುಂಚೂನಿಯಲ್ಲಿದ್ದು ಶ್ರಮಿಸಿದ್ದು, ಸರ್ಕಾರ ಕೆಲಸಕ್ಕೆ ಸರಿಯಾದ ವೇತನ ನೀಡುತ್ತಿಲ್ಲ. ಈ ಹಿಂದೆ ಹಲವು ಬಾರೀ ಮುಷ್ಕರ ನಡೆಸಿದರೂ ಸರ್ಕಾರ ಭರಸೆಯನ್ನು ಬಿಟ್ಟು ಬೇಡಿಕೆ ಈಡೇರಿಸಿಲ್ಲ. ಅನಿವಾರ್ಯವಾಗಿ ಈಗ ಪ್ರತಿಘಟನೆ ನಡೆಸುತ್ತಿದ್ದು, ಮಾಸಿಕ 12 ಸಾವಿರ ವೇತನ ನಿಗದಿಗೆ ಆಗ್ರಹ ಮಾಡುತ್ತೇವೆ ಎಂದು ತಿಳಿಸಿದರು.

ಸಾಂಧರ್ಬಿಕ ಚಿತ್ರ

Comments

Leave a Reply

Your email address will not be published. Required fields are marked *