ಕೊಡಗಿನಲ್ಲಿ ಗಾಳಿ ಸಹಿತ ಮಳೆ ಅರ್ಭಟ – ಉಕ್ಕಿ ಹರಿಯುತ್ತಿರುವ ನದಿಗಳು

ಮಡಿಕೇರಿ: ಕಳೆದ ರಾತ್ರಿಯಿಂದ ಕೊಡಗು ಜಿಲ್ಲೆಯಾದ್ಯಂತ ಮಳೆ ಬಿರುಸು ಪಡೆದುಕೊಂಡಿದೆ. ಮಡಿಕೇರಿ ತಾಲೂಕಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದ್ದು, ಚಳಿಯ ವಾತಾವರಣ ಮುಂದುವರೆದಿದೆ.

ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ನಿರಂತರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹಾರಂಗಿ ವ್ಯಾಪ್ತಿಯಲ್ಲೂ ಮಳೆ ಸುರಿಯುತ್ತಿದ್ದು, ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ. ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಳೆಯಾಗುತ್ತಿದ್ದು, ಕೃಷಿಕ ವರ್ಗ ಹರ್ಷಗೊಂಡಿದೆ. ಜಿಲ್ಲೆಯ ಬೆಟ್ಟಗುಡ್ಡ ಹಾಗೂ ನದಿ ತೀರದ ನಿವಾಸಿಗಳು ಮಳೆ ಹೆಚ್ಚಾಗುವ ಆತಂಕದಲ್ಲಿದ್ದಾರೆ.

ಮಡಿಕೇರಿ ನಗರದಲ್ಲಿ ಬೆಳ್ಳಗ್ಗೆಯಿಂದಲೂ, ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಜೊತೆಗೆ, ಚಳಿಯ ವಾತಾವರಣವಿದೆ. ಈ ವಾತಾವರಣದಲ್ಲಿ ಕಾಲ ಕಾಳೆಯಲು ರಾಜ್ಯ ಮತ್ತು ಹೊರ ರಾಜ್ಯದಿಂದ ಪ್ರವಾಸಿಗರ ಆಗಮನವಾಗುತ್ತಿದ್ದು, ಮಳೆಯಿಂದ ಪ್ರವಾಸಿತಾಣಗಳು ಕೂಡ ಹಸಿರಿನಿಂದ ಆಕರ್ಷಣೆ ಪಡೆದುಕೊಂಡಿದೆ. ಜಲಪಾತಗಳು ತುಂಬಿ ಕರೆಯುತ್ತಿವೆ. ಹರಿಯುತ್ತಿದ್ದು, ಪ್ರಕೃತಿ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ. ಇದನ್ನೂ ಓದಿ: ಎರಡು ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಬೆಳವಣಿಗೆ – ಡಬ್ಲ್ಯೂಎಚ್‍ಒ

Comments

Leave a Reply

Your email address will not be published. Required fields are marked *