ಕೊರೊನಾಗೆ ಅಂಬ್ಯುಲೆನ್ಸ್ ಡ್ರೈವರ್ ಬಲಿ

ಮೈಸೂರು: ಕೊರೊನಾಗೆ ಅಂಬ್ಯುಲೆನ್ಸ್ ಡ್ರೈವರ್ ಸಾವನ್ನಪ್ಪಿರುವ ಘಟನೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ರುದ್ರೇಶ್ (44) ಸಾವನ್ನಪ್ಪಿರುವ ಅಂಬುಲೆನ್ಸ್ ಡ್ರೈವರ್. ಕಳೆದ 12 ವರ್ಷಗಳಿಂದ ರುದ್ರೇಶ್ ಅಂಬ್ಯುಲೆನ್ಸ್ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಮಳವಳ್ಳಿ ವಿಭಾಗದಲ್ಲಿ 108 ಅಂಬ್ಯುಲೆನ್ಸ್ ಡ್ರೈವರ್ ಆಗಿ ರುದ್ರೇಶ್ ಕೆಲಸ ಮಾಡುತ್ತಿದ್ದರು.

10 ದಿನಗಳ ಹಿಂದೆ ಇವರಿಗೆ ಕೊರೊನಾ ಸೋಂಕು ತಗುಲಿತ್ತು. ಆರಂಭದಲ್ಲಿ ಕೆ.ಎಂ.ದೊಡ್ಡಿಯ ಖಾಸಗಿ ಆಸ್ಪತ್ರೆಯಲ್ಲಿ ರುದ್ರೇಶ್‍ಗೆ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ಆರೋಗ್ಯದಲ್ಲಿ ಏರುಪೇರಾದ ಕಾರಣ ರುದ್ರೇಶ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದ ಕಾರಣ ರುದ್ರೇಶ್ ಸಾವನ್ನಪ್ಪಿದ್ದಾರೆ. ರುದ್ರೇಶ್ ಅಂಬ್ಯುಲೆನ್ಸ್ ಡ್ರೈವರ್ ಆಗಿ ಕೆಲಸ ಮಾಡುವ ಮೂಲಕ ಕುಟುಂಬಕ್ಕೆ ಆಧಾರ ಸ್ತಂಭ ಆಗಿದ್ದರು. ಇದೀಗ ಇವರನ್ನು ಕಳೆದುಕೊಂಡ ಕುಟುಂಬ ಕಣ್ಣೀರಿಡುತ್ತಿದೆ.

Comments

Leave a Reply

Your email address will not be published. Required fields are marked *