ಕೊರೊನಾದಿಂದ ಗುಣಮುಖನಾದ ವೃದ್ಧ ಮನನೊಂದು ಆತ್ಮಹತ್ಯೆ

ರಾಯಚೂರು: ಮಹಾಮಾರಿ ಕೋವಿಡ್-19 ಸೋಂಕಿನಿಂದ ಗುಣಮುಖನಾಗಿದ್ದ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರಾಗಲಪರ್ವಿ ಗ್ರಾಮದಲ್ಲಿ ನಡೆದಿದೆ.

65 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಳ್ಳಾರಿಯಲ್ಲಿ ಕ್ವಾರಂಟೈನ್ ಆಗಿದ್ದ ವೃದ್ಧನಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿತ್ತು. ಕ್ವಾರಂಟೈನ್ ಅವಧಿ ಮುಗಿದು ಸೋಂಕಿನಿಂದ ಗುಣಮುಖನಾಗಿದ್ದ. ಆದರೆ ಗುಣಮುಖರಾದರೂ ಜನರು ಬೇರೆ ದೃಷ್ಟಿಯಿಂದ ನೋಡುತ್ತಿದ್ದ ಕಾರಣ ಮಾನಸಿಕವಾಗಿ ನೊಂದಿದ್ದರು ಎಂಬ ಮಾಹಿತಿ ಲಭಿಸಿದೆ.

ಸೋಂಕಿನಿಂದ ಗುಣಮುಖರಾಗಿ ಕ್ವಾರಂಟೈನ್ ಅವಧಿ ಮುಗಿಸಿ ರಾಗಲಪರ್ವಿ ಆಗಮಿಸಿದ ಬಳಿಕ ಮನನೊಂದು ಸಾವಿಗೆ ಶರಣಾಗಿದ್ದಾನೆ. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ದಾಖಲಾದ ಮೊದಲ ಕೋವಿಡ್-19 ಪ್ರಕರಣ ಇದಾಗಿತ್ತು.

Comments

Leave a Reply

Your email address will not be published. Required fields are marked *