ಕೊರೊನಾದಿಂದ ಬಳಲುತ್ತಿರೋ ಸಿಎಂ ಆರೋಗ್ಯ ಸ್ಥಿರ

ಬೆಂಗಳೂರು: ಕೋವಿಡ್ ನಿಂದ ಮಣಿಪಾಲ್ ಆಸ್ಪತ್ರೆ ಸೇರಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಲವಲವಿಕೆಯಿಂದ ಇದ್ದಾರೆ ಅಂತ ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಹೇಳಿದೆ.

ತಜ್ಞ ವೈದ್ಯರ ತಂಡ ಶ್ವಾಸಕೋಶದ ಮೇಲೂ ನಿಗಾ ಇರಿಸಲಾಗಿದೆ ಅಂದಿದೆ. ಸಿಎಂ ಮೊಮ್ಮಗಳು ಸೌಂದರ್ಯ ಮತ್ತು ಅವರ ಪತಿ ಡಾ.ನಿರಂಜನ್‍ರಿಗೂ ಪಾಸಿಟಿವ್ ಆಗಿದ್ದು, ಮಣಿಪಾಲದಲ್ಲಿ ಸಿಎಂ ಪಕ್ಕದ ವಾರ್ಡ್‍ನಲ್ಲೇ ದಾಖಲಿಸಲಾಗಿದೆ.

ಸಿಎಂ ಪ್ರಾಥಮಿಕ ಸಂಪರ್ಕಿತರಾಗಿರೋ ಡಿಸಿಎಂ ಲಕ್ಷ್ಮಣ ಸವದಿ ಗನ್‍ಮ್ಯಾನ್‍ಗೂ ಸೋಂಕು ದೃಢವಾಗಿದೆ. ಹಾಗಾಗಿ ತಾವು ಐಸೋಲೇಷನ್‍ನಲ್ಲಿರೋದಾಗಿ ಸವದಿ ತಿಳಿಸಿದ್ದಾರೆ. ಕೋವಿಡ್ ತೀವ್ರಗೊಂಡ ಕಾರಣ ವಿಧಾನಸೌಧ, ವಿಕಾಸಸೌಧಗಳಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧ ಹೇರಲಾಗಿದೆ.

Comments

Leave a Reply

Your email address will not be published. Required fields are marked *