ಕೊರೊನಾ ಅತಂಕ – ದೊಣ್ಣೆ ಹಿಡ್ಕೊಂಡು ನಿಂತ ಗ್ರಾಮಸ್ಥರು

ಹಾವೇರಿ: ಕೊರೊನಾ ತಡೆಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ಗ್ರಾಮಸ್ಥರು ಗ್ರಾಮಕ್ಕೆ ಸ್ವಯಂ ಪ್ರೇರಿತ ನಿರ್ಬಂಧ ಹಾಕಿಕೊಂಡಿದ್ದಾರೆ.

ಗ್ರಾಮಕ್ಕೆ ಬೇರೆ ಊರುಗಳಿಂದ ಸಂಪರ್ಕ ಕಲ್ಪಿಸುವ ಗಡಿಗಳಲ್ಲಿ ದೊಣ್ಣೆ ಹಿಡಿದುಕೊಂಡು ಗ್ರಾಮಸ್ಥರು ಕಾವಲು ಕಾಯ್ತಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರುವಂತಿಲ್ಲ, ಗ್ರಾಮಗಳಿಂದ ಯಾರೂ ಹೊರಹೋಗದಂತೆ ಗ್ರಾಮಸ್ಥರು ನೋಡಿಕೊಳ್ಳುತ್ತಿದ್ದಾರೆ.

ಸುಮಾರು ಹದಿನೈದು ದಿನ ಗ್ರಾಮಕ್ಕೆ ಯಾರಿಗೂ ಎಂಟ್ರಿ ಇಲ್ಲ, ಗ್ರಾಮದ ಯಾರೂ ಹೊರಹೋಗದಂತೆ ಕ್ರಮ ಕೈಗೊಂಡಿದ್ದಾರೆ. ಗ್ರಾಮದ ಪ್ರತಿ ಮನೆಗಳ ಸದಸ್ಯರು ಇಂತಿಷ್ಟು ಗಂಟೆಗಳ ಲೆಕ್ಕದಲ್ಲಿ ಕಾವಲು ಕಾಯುತ್ತಿದ್ದಾರೆ.

Comments

Leave a Reply

Your email address will not be published. Required fields are marked *