ಕೊರೊನಾ ನಿಯಂತ್ರಣ ವೈಫಲ್ಯದ ಕಳಂಕ ಕಟ್ಟಬೇಡಿ – ಶ್ರೀರಾಮುಲು ಬೇಸರ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಯ ಪರಿಣಾಮ ಆರೋಗ್ಯ ಸಚಿವ ಶ್ರೀರಾಮುಲು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ತನ್ನ ಖಾತೆ ಬದಲಾವಣೆ ಸಂಬಂಧ ಶ್ರೀರಾಮುಲು ಅವರು ನಿನ್ನೆ ರಾತ್ರಿಯೇ ಮುಖ್ಯಮಂತ್ರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ. ಇಂದು ಬೆಳಗ್ಗೆ ಭೇಟಿ ಮಾಡುವಂತೆ ಶ್ರೀರಾಮುಲುಗೆ ಸಿಎಂ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ರಾತ್ರಿ ಸಿಎಂ ಜೊತೆಗಿನ ದೂರವಾಣಿ ಕರೆ ವೇಳೆ ಬೇಸರ ಹೊರಹಾಕಿರುವ ಸಚಿವ, ಕೊರೊನಾ ನಿರ್ವಹಣೆಯಲ್ಲಿ ವಿಫಲನಾಗಿದ್ದೇನೆಂಬ ಹಣೆ ಪಟ್ಟಿ ಬರೋದು ಬೇಡ. ಈ ಸಂದರ್ಭದಲ್ಲಿ ಖಾತೆ ಬದಲಾವಣೆ ಮಾಡಬೇಡಿ. ಸ್ವಲ್ಪ ಸಮಯ ಕೊಡಿ, ನಾನೇ ಆರೋಗ್ಯ ಇಲಾಖೆ ಬಿಟ್ಟು ಕೊಡುತ್ತೇನೆ ಎಂದು ಸಿಎಂ ಬಳಿ ರಾಮುಲು ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: ದಿಢೀರ್ ಬೆಳವಣಿಗೆ – ರಾಮುಲು ಬಳಿಯಿದ್ದ ಆರೋಗ್ಯ ಖಾತೆಗೆ ಕತ್ತರಿ?, ಯಾರಿಗೆ ಯಾವ ಖಾತೆ?

ಇಂದು ಬೆಳಗ್ಗೆ ಸಿಎಂ ಬಿಎಸ್‍ವೈ ಅವರನ್ನು ಖುದ್ದು ಭೇಟಿ ಮಾಡಿ ಚರ್ಚೆ ನಡೆಸಲಿದ್ದು, ಶ್ರೀರಾಮುಲು ಮನವೊಲಿಕೆ ಮಾಡ್ತಾರಾ ಸಿಎಂ ಬಿಎಸ್‍ವೈ? ಅಥವಾ ತಮ್ಮ ನಿರ್ಧಾರದಂತೆ ಖಾತೆ ಬದಲಾವಣೆ ಮಾಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಶ್ರೀರಾಮುಲು ಹಾಗೂ ಸಿಎಂ ಅವರ ಇಂದಿನ ಭೇಟಿ ತೀವ್ರ ಕುತೂಹಲ ಹುಟ್ಟಿದೆ. ಇದನ್ನೂ ಓದಿ: ಖಾತೆ ಅದಲು, ಬದಲಿಗೆ ಅಸಮಾಧಾನ – ರಾತ್ರಿಯೇ ಬೆಂಗ್ಳೂರಿಗೆ ಧಾವಿಸಿದ ರಾಮುಲು

Comments

Leave a Reply

Your email address will not be published. Required fields are marked *