ಕೊರೊನಾ ಭೀತಿ-ಮಂಡ್ಯದಲ್ಲಿ 30ಕ್ಕೂ ಹೆಚ್ಚು ಜನ ಸೇರುವ ಕಾರ್ಯಕ್ರಮ ನಿಷೇಧ

ಮಂಡ್ಯ: 30ಕ್ಕೂ ಹೆಚ್ಚು ಜನ ಸೇರುವ ಕಾರ್ಯಕ್ರಮಗಳಿಗೆ ಮಂಡ್ಯಾದಲ್ಲಿ ಜಿಲ್ಲಾಡಳಿತ ನಿಷೇಧ ಹೇರುವ ಮೂಲಕವಾಗಿ ಕೊರೊನಾ ಕುರಿತಾಗಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದೆ.

ಕೊರೊನಾ 3ನೇ ಅಲೆ ತಡೆಗೆ ಮಂಡ್ಯ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, 30ಕ್ಕೂ ಹೆಚ್ಚು ಜನ ಸೇರುವ ಎಲ್ಲಾ ಚಟುವಟಿಕೆಗಳಿಗೆ ನಿಬರ್ಂಧಿ ವಿಧಿಸಿ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡ, ಕಾಸರಗೋಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳು ಕ್ಲೋಸ್

ಜಿಲ್ಲೆಯಲ್ಲಿ 30ಕ್ಕಿಂತ ಹೆಚ್ಚು ಜನ ಸೇರುವ ಮದುವೆ, ನಿಶ್ಚಿತಾರ್ಥ, ಬೀಗರ ಔತಣಕೂಟ, ಅಂತ್ಯಸಂಸ್ಕಾರ, ತಿಥಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ. ದೇವಸ್ಥಾನಗಳಲ್ಲಿ ದೈನಂದಿನ ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ.

 

ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ವಿಶೇಷ ಆಚರಣೆ, ಧಾರ್ಮಿಕ ಸೇವೆ, ಉತ್ಸವಗಳನ್ನು ನಿಷೇಧ ಮಾಡಲಾಗಿದೆ. ಅಲ್ಲದೇ ದೇವಸ್ಥಾನಗಳಿಗೆ ವಾರಾಂತ್ಯದಲ್ಲಿ ಹಾಗೂ ಸಾರ್ವತ್ರಿಕ ರಜೆಯ ದಿನಗಳಲ್ಲಿ ಭಕ್ತರಿಗೆ ದೇವಸ್ಥಾನಗಳಿಗೆ ನಿಷೇಧ ಹೇರಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜರುಗುವ ಗ್ರಾಮ ದೇವತೆಗಳ ಹಬ್ಬ, ಸಾಮೂಹಿಕ ಭೋಜನಕ್ಕೂ ಬ್ರೇಕ್ ಹಾಕಲಾಗಿದೆ.

Comments

Leave a Reply

Your email address will not be published. Required fields are marked *