ಕೊರೊನಾ ಮತ್ತಷ್ಟು ಇಳಿಕೆ – 23 ಜಿಲ್ಲೆಗಳಲ್ಲಿ ಶೂನ್ಯ ಮರಣ ದರ

– ಗುಣಮುಖ ಪ್ರಮಾಣ ಶೇ.98.72

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಳ ಸಂಖ್ಯೆ ಇಳಿಮುಖವಾಗಿದ್ದು, ಇಂದು 23 ಜಿಲ್ಲೆಗಳಲ್ಲಿ ಶೂನ್ಯ ಮರಣ ದಾಖಲಾಗಿದೆ. ಇಂದು 1,336 ಹೊಸ ಪ್ರಕರಣಗಳು ವರದಿಯಾಗಿದ್ದು, 2,100 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಈವರೆಗೂ ರಾಜ್ಯದಲ್ಲಿ 8,27,241 ಜನ ಗುಣಮುಖರಾಗಿದ್ದು, ಚೇತರಿಕೆ ದರ ಶೇ.95.72ರಷ್ಟಿದೆ. ಇನ್ನು ಕೋವಿಡ್ ಮರಣ ಪ್ರಮಾಣ ಶೇ.1.39 ಮತ್ತು ಖಚಿತ ಪ್ರಕರಣಗಳ ಪ್ರಮಾಣ ಶೇ.1.77ರಷ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,64,140ಕ್ಕೆ ಏರಿಕೆಯಾಗಿದ್ದು, 25,323 ಸಕ್ರಿಯ ಪ್ರಕರಣಗಳಿವೆ.

ಇಂದು ಕೊರೊನಾಗೆ 19 ಸೋಂಕಿತರು ಮರಣ ಹೊಂದಿದ್ದು, 693 ಜನ ಐಸಿಯುನಲ್ಲಿ ಚಿಕಿತ್ಸೆ ಪಡದುಕೊಳ್ಳುತ್ತಿದ್ದಾರೆ. ಇಂದು 75,384 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ರಾಜಧಾನಿಯಲ್ಲಿಯೂ ಸಹ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇಂದು 729 ಮಂದಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 17,707 ಸಕ್ರಿಯ ಪ್ರಕರಣಗಳಿವೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 24, ಬಳ್ಳಾರಿ 15, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 40, ಬೆಂಗಳೂರು ನಗರ 729, ಬೀದರ್ 17, ಚಾಮರಾಜನಗರ 7, ಚಿಕ್ಕಬಳ್ಳಾಪುರ 21, ಚಿಕ್ಕಮಗಳೂರು 29, ಚಿತ್ರದುರ್ಗ 13, ದಕ್ಷಿಣ ಕನ್ನಡ 30, ದಾವಣಗೆರೆ 24, ಧಾರವಾಡ 5, ಗದಗ 3, ಹಾಸನ 30, ಹಾವೇರಿ 4, ಕಲಬುರಗಿ 14, ಕೊಡಗು 8, ಕೋಲಾರ 9, ಕೊಪ್ಪಳ 17, ಮಂಡ್ಯ 38, ಮೈಸೂರು 52, ರಾಯಚೂರು 14, ರಾಮನಗರ 9, ಶಿವಮೊಗ್ಗ 11, ತುಮಕೂರು 89, ಉಡುಪಿ 21, ಉತ್ತರ ಕನ್ನಡ 32, ವಿಜಯಪುರ 16 ಮತ್ತು ಯಾದಗಿರಿಯಲ್ಲಿ 6 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಮೊದಲ ಕೊರೊನಾ ರೋಗಿ ಕಾಣಿಸಿಕೊಂಡು ಇಂದಿಗೆ ಒಂದು ವರ್ಷ

Comments

Leave a Reply

Your email address will not be published. Required fields are marked *