ಕೊರೊನಾ ವಾರಿಯರ್ಸ್, ಗುಣಮುಖರು ಸ್ವಾತಂತ್ರ್ಯೋತ್ಸವದಲ್ಲಿ ಭಾಗಿ: ಬಿಬಿಎಂಪಿ ಆಯುಕ್ತ

ಬೆಂಗಳೂರು: ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿ 25 ಮಂದಿ ಕೊರೊನಾ ವಾರಿಯರ್ಸ್ ಹಾಗೂ 25 ಮಂದಿ ಕೋವಿಡ್ 19 ನಿಂದ ಗುಣಮುಖರಾದವರು ಭಾಗಿಯಾಗಲಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ತಿಳಿಸಿದ್ದಾರೆ.

ನಗರದ ಮಾಣಿಕ್ ಷಾ ಮೈದಾನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಅಲ್ಲದೆ ಸಾರ್ಜನಿಕರಿಗೆ ಪ್ರವೇಶ ಕೂಡ ಇರಲ್ಲ. 25 ಜನ ಕೋವಿಡ್ ವಾರಿಯರ್ಸ್ ಹಾಗೂ ಕೋವಿಡ್ ನಿಂದ ಗುಣಮುಖರಾದ 25 ಮಂದಿ ಭಾಗಿ ಮಾತ್ರ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಧ್ವಜಾರೋಹಣ ಮಾಡಲಿದ್ದಾರೆ. ಪ್ರತಿ ವರ್ಷದಂತೆ ಪೆರೇಡ್ ವೀಕ್ಷಣೆಗೆ ಹೋಗೋದಿಲ್ಲ. ಧ್ವಜಾರೋಹಣದ ನಂತರ ಸಿಎಂ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಸುದ್ದಿಗೋಷ್ಟಿ ಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂಥ್, ಡಿಸಿ ಶಿವಮೂರ್ತಿ ಸೇರಿದಂತೆ ಹಿರಿಯ  ಅಧಿಕಾರಿಗಳು ಭಾಗಿಯಾಗಿದ್ದರು.

Comments

Leave a Reply

Your email address will not be published. Required fields are marked *