ಕೊರೊನಾ ಸೋಂಕಿಗೆ ಒಂದು ವರ್ಷದ ಕಂದಮ್ಮ ಬಲಿ

ಶಿವಮೊಗ್ಗ: ಕೊರೊನಾ ಸೋಂಕಿಗೆ ಒಂದು ವರ್ಷದ ಕಂದಮ್ಮ ಬಲಿಯಾದ ಮನಕಲಕುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.

ಮೃತಪಟ್ಟ ಮಗುವನ್ನು ಉದಮ (1) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಗಾಂಧಿ ಬಜಾರಿನ ಮಡಿವಾಳರ್ ಕೇರಿ ನಿವಾಸಿಯಾಗಿರುವ ಉದಯ – ಚೈತ್ರಾ ದಂಪತಿಯ ಮಗು ಕೊರೊನಾ ಸೋಂಕಿಗೆ ಬಲಿಯಾಗಿದೆ. ಇದನ್ನೂ ಓದಿ : ವಿವಾಹವಾದ ನಾಲ್ಕೇ ದಿನಕ್ಕೆ ಕೊರೊನಾಗೆ ಬಲಿಯಾದ ನವ ವಿವಾಹಿತೆ

ಮಗುವಿಗೆ ಬಿಳಿ ರಕ್ತಕಣ ಕಡಿಮೆಯಾಗಿದೆ ಎಂದು ಹೆತ್ತವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಮಗುಗೆ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ನಂತರ ಮಗುವನ್ನು ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ : ಮದುವೆಯಾದ ನಾಲ್ಕೇ ದಿನಕ್ಕೆ ನವವಿವಾಹಿತೆ ಕೊರೊನಾಗೆ ಬಲಿ..!

ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ ನಂತರ ಮಗುವನ್ನು ಕೋವಿಡ್ ಟೆಸ್ಟ್‍ಗೆ ಒಳಪಡಿಸಿದ್ದಾರೆ. ನಂತರ ಮಗುಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿದೆ. ಚಿಕಿತ್ಸೆ ಪಡೆಯುತ್ತಿದ್ದ ಮಗು ನಿನ್ನೆ ರಾತ್ರಿ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದೆ. ಮಗು ಮೃತಪಟ್ಟ ನಂತರ ಹೆತ್ತವರು ಹಾಗೂ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ. ಇದನ್ನೂ ಓದಿ:  ಸೋಂಕು ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ವ್ಯಕ್ತಿಯೇ ಕೊರೊನಾಗೆ ಬಲಿ

Comments

Leave a Reply

Your email address will not be published. Required fields are marked *