ಕೊರೊನಾ ಸೋಂಕಿಗೆ ಯುವಕ ಬಲಿ

ಕೊಪ್ಪಳ: ಕೊರೊನಾದ ಎರಡನೇ ಅಲೆಯಲ್ಲಿ ಹೆಚ್ಚಾಗಿ ಯುವಕ ಯುವತಿಯರು ಸಾವನ್ನಪ್ಪುತ್ತಿದ್ದು, ಸದ್ಯ ಕೊಪ್ಪಳ ಜಿಲ್ಲೆಯಲ್ಲಿ ಯುವಕನೋರ್ವ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ.

ಕೊಪ್ಪಳದ ಗಂಗಾವತಿ ತಾಲೂಕಿನ ಅರಳಹಳ್ಳಿ ರಾಜರಾಜೇಶ್ವರಿ ಬ್ರಹನ್ಮಠದ ಸ್ವಾಮೀಜಿಯಾದ ಶ್ರೀ ಗವಿಸಿದ್ದೇಶ್ವರ ತಾತನವರ ದ್ವಿತೀಯ ಸುಪುತ್ರ ಪ್ರಸಾದ್ (19)  ಮೃತ ಯುವಕ.

ಕಳೆದ 10 ದಿನಗಳ ಹಿಂದೆ ಯುವಕನಿಗೆ ಸೊಂಕು ಕಾಣಿಸಿಕೊಂಡಿದ್ದು, ಕೊಪ್ಪಳದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದನು, ಚಿಕಿತ್ಸೆ ಫಲಕಾರಿಯಾಗದೆ ತೀವ್ರ ಉಸಿರಾಟದ ತೊಂದರೆಯಿಂದ ಪ್ರಸಾದ್ ಇಂದು ಕೊನೆಯುಸಿರೆಳೆದಿದ್ದಾನೆ. ಬಾಳಿ-ಬದುಕಬೇಕಾದ ಯುವಕ ಕೊರೊನಾಗೆ ಬಲಿಯಾಗಿದ್ದು, ಕುಟುಂಬದ ಅಕ್ರಂದನ ಮುಗಿಲು ಮುಟ್ಟಿದೆ. ನಂತರ ಮಠದ ಜಮೀನಿನಲ್ಲಿ ಯುವಕನ ಅಂತ್ಯ ಸಂಸ್ಕಾರ ನಡೆಸಲಾಯಿತು.

Comments

Leave a Reply

Your email address will not be published. Required fields are marked *