ಕೋವಿಡ್ 19 ರೋಗಿಗಳಿದ್ದ ಹೋಟೆಲ್‍ನಲ್ಲಿ ಅಗ್ನಿ ಅವಘಡ- 7 ಮಂದಿ ದುರ್ಮರಣ

– ಹೋಟೆಲ್‍ನಲ್ಲಿದ್ದ 30 ಮಂದಿಯ ರಕ್ಷಣೆ

ಹೈದರಾಬಾದ್: ಕೋವಿಡ್ 19 ಸೌಲಭ್ಯವಿದ್ದ ಹೋಟೆಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಏಳು ಮಂದಿ ಸಜೀವ ದಹನವಾದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.

ಘಟನೆಯ ಮಾಹಿತಿ ಅರಿತ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ. ಹೋಟೆಲ್‍ನಲ್ಲಿದ್ದ ಸುಮಾರು 30 ಮಂದಿಯನ್ನು ರಕ್ಷಿಸಲಾಗಿದೆ ವಿಜಯವಾಡ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ. ಸುಮಾರು 22 ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಕಟ್ಟಡದಲ್ಲಿದ್ದ ಎಲ್ಲರನ್ನೂ ಸ್ಥಳಾಂತರಿಸಿದ್ದೇವೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯ ವೇಳೆ ಬೆಳಕಿಗೆ ಬಂದಿದ್ದು, ಘಟನೆಗೆ ನಿಖರ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ ಎಂದು ಕೃಷ್ಣ ಡಿಸಿ ಮೊಹಮ್ಮದ್ ಇಮ್ತಿಯಾಜ್ ತಿಳಿಸಿದ್ದಾರೆ.

ಮೃತಪಟ್ಟ 7 ಮಂದಿ ಕೂಡ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿ ಲಭ್ಯವಾಗಿದೆ.

Comments

Leave a Reply

Your email address will not be published. Required fields are marked *